Site icon ಉಡುಪಿ ನ್ಯೂಸ್ ಪ್ಲಸ್

ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ, ಪೆರ್ಡೂರು ಗ್ರಾಮ ಪಂಚಾಯತ್, ಪಾಥಮಿಕ ಆರೋಗ್ಯ ಕೇಂದ್ರ ಕುಕ್ಕೆಹಳ್ಳಿ, ವಿಶ್ವಹಿಂದೂ ಪರಿಷದ್ ಮತ್ತು ಭಜರಂಗದಳ, ಪೆರ್ಡೂರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರೋಟರಿ ರೋಯಲ್ ಬ್ರಹ್ಮಾವರ, ಮಾಸ್ತಿಯಮ್ಮ ಫ್ರೆಂಡ್ಸ್, ಬುಕ್ಕಿಗುಡ್ಡೆ, ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ (ರಿ) ಉಡುಪಿ – ಪೆರ್ಡೂರು ಘಟಕ, ನವೋದಯ ಸ್ವಸಹಾಯ ಸಂಘ ಪೆರ್ಡೂರು ವಲಯ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದುಮನೆ ರಕ್ತನಿಧಿ, ಕೆ.ಎಂ.ಸಿ. ಮಣಿಪಾಲ, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದಲ್ಲಿ ಇಂದು ದಿನಾಂಕ 16-02-2025 ರಂದು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ “ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ”ವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ತುಕಾರಾಮ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಸತೀಶ್ ಸಾಲಿಯಾನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version