ಸುರತ್ಕಲ್ ಪೇಟೆಯಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಬಟ್ಟೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನನ್ನು ಭೀಕರವಾಗಿ ಕಡಿದು ಹಾಕಿದ್ದಾರೆ. ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ
ಮಂಗಳ ಪೇಟೆಯ ಫಾಝಿಲ್ (23) ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿತ್ತು ನಾಳೆ ಹುಟ್ಟು ಹಬ್ಬದ ಆಚರಣೆಗೆಂದು ಚಪ್ಪಲಿ ಮತ್ತು ಸ್ಮಾರ್ಟ್ ವಾಚ್ ಖರೀದಿಗೆ ಬಂದಿದ್ದ ಫಾಝಿಲ್ ಮೇಲೆ ರಾತ್ರಿ ಅಂಗಡಿಯ ಎದುರಿನ ಜಗಲಿಯಲ್ಲೇ ಮಾರಕಾಯುಧಗಳಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಫಾಝಿಲ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
