Site icon ಉಡುಪಿ ನ್ಯೂಸ್ ಪ್ಲಸ್

ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ (ರಿ) ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೃಹತ್ ರಕ್ತದಾನ ಶಿಬಿರ

ಹಳೆಯಂಗಡಿ: ರಿಲಯನ್ಸ್ ಅಸೋಸಿಯೇಶನ್ (ರಿ) ಬೊಳ್ಳೂರು ಹಳೆಯಂಗಡಿ ಇದರ ವತಿಯಿಂದ, ಮುಹಿಯುದ್ದೀನ್ ಜುಮ್ಮಾ ಮಸೀದಿ ಬೊಳ್ಳೂರು ಇದರ ಆಶ್ರಯದಲ್ಲಿ, ಕೆ.ಎಂ.ಸಿ ಅಸ್ಪತ್ರೆ ಮಂಗಳೂರು ಇವರ ಜಂಟಿ ಸಹಾಭಾಗಿತ್ವದಲ್ಲಿ, ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ ಹಳೆಯಂಗಡಿ ಹಾಗೂ ಫ್ರೆಂಡ್ಸ್ ಕ್ರಿಕೆಟರ್ಸ್‌ ಇಂದಿರಾನಗರ ಇವರ ಸಹಯೋಗದೊಂದಿಗೆ “ಬೃಹತ್ ರಕ್ತದಾನ ಶಿಬಿರವು’ ಬೊಳ್ಳೂರಿನ ಮುಹಿಯದ್ದೀನ್ ಜುಮ್ಮಾ ಮಸೀದಿ ವಠಾರದಲ್ಲಿ ಶುಕ್ರವಾರ ನಡೆಯಿತು. 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ರಕ್ತದಾನ ಶಿಬಿರದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೊಳ್ಳೂರು ಮಸೀದಿಯ ಖತೀಬರಾದ ‘ಮೊಹಮ್ಮದ್ ಶರೀಫ್ ಅರ್ಷಾದಿ ಅವರು ” ಒಂದು ಜೀವ ಉಳಿಸುವ ನೆಲೆಯಲ್ಲಿ ದಾನಗಳಲ್ಲೇ ರಕ್ತದಾನ ಬಹಳ ಪ್ರಮುಖವಾಗಿದ್ದು, ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು, ಇಂತಹ ಮಹತ್ವಪೂರ್ಣ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಸ್ಥಳೀಯ ಸಂಘ ಸಂಸ್ಥೆಗಳ ಕ್ರಿಯಾಶೀಲತೆ ಅತ್ಯಂತ ಶ್ರೇಷ್ಠ ಮತ್ತು ಸಮಾಜಕ್ಕೆ ಮಾದರಿಯಾದ ಒಂದು ಚಿಂತನೆ” ಎಂದರು. ಮಾನವ ರಕ್ತದಾನ ಮಾಡುವುದರಿಂದ ಹೃದಯಾಘಾತ, ಮದುಮೇಹ ನಂತಹ ಅನೇಕ ಖಾಯಿಲೆಗಳನ್ನು ತಡೆಗಟ್ಟಲು ಸಾದ್ಯವಾಗುತ್ತದೆ ಹಾಗೂ ಹಳೆ ರಕ್ತ ದೇಹದಿಂದ ಹೋಗಿ ಕೆಲವೇ ದಿನಗಳಲ್ಲಿ ಹೊಸ ರಕ್ತ ) ಉತ್ಪತ್ತಿಯಾಗುತ್ತದೆ ಎಂದು ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ವೈದ್ಯರಾದ ಡಾಕ್ಟರ್ ವಸಂತ್ ಅವರು ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿದರು.ವೇದಿಕೆಯಲ್ಲಿ ರಿಲಯನ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾದ ಆರಿಶ್ ನವರಂಗ್, ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಬಿ.ಎಂ ಮೊಹಮ್ಮೆದ್, ಹಳೆಯಂಗಡಿ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷರಾದ ನಾಗೇಶ್ ಬಂಗೇರ, ಫ್ರೆಂಡ್ಸ್ ಕ್ರಿಕೆಟರ್ಸ್‌ ಇಂದಿರಾನಗರ ಅಧ್ಯಕ್ಷರಾದ ಹಸೈನಾ‌ರ್, ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಅಝೀಜ್ ಐ.ಎ.ಕೆ ಹಾಗು ಅಕ್ಟರ್ ಬೊಳ್ಳೂರು ಉಪಸ್ಥಿತರಿದ್ದರು. ಜಾತಿ ಧರ್ಮ ಲಿಂಗ ಭೇದವಿಲ್ಲದೆ ಪರಿಸರದ ಎಲ್ಲರೂ 1 ಸೇರಿ ರಕ್ತದಾನ ಮಾಡುವ ಮೂಲಕ ಶಿಬಿರದಲ್ಲಿ ಒಟ್ಟು 75 ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವುದರೊಂದಿಗೆ ಜೀವದಾನಿಗಳಾದರು. ಕಾರ್ಯಕ್ರಮದಲ್ಲಿ ರಿಲಯನ್ಸ್ ನ ಸದಸ್ಯರಾದ ಕಲಂದರ್ ಕೌಶಿಕ್, ಶಮೀಮ್, ಫಾರೂಕ್, ಮಮ್ರಾಜ್, ರಿಯಾಜ್, ಇಲ್ಯಾಸ್, ಮೊಹಮ್ಮದ್ ಆಲಿ, ಭಾವ, ಅಕ್ಷಾಂ, ಅಶ್ರಫ್, ಸಲ್ವಾನ್, ಇಮ್ರಾನ್, ಕಲಂದರ್, ಸುಹೈಲ್ ಹಾಗು ಇನ್ನಿತರ ಸದಸ್ಯರು ಹಾಜರಿದ್ದರು.

ಇಟ್ಬಾಲ್ ಎಂ.ಎ. ಕಾರ್ಯಕ್ರಮ ನಿರೂಪಿಸಿ, ಅಬ್ದುಲ್ ಮುಬಾರಕ್ ವಂದಿಸಿದರು.

Exit mobile version