Site icon ಉಡುಪಿ ನ್ಯೂಸ್ ಪ್ಲಸ್

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎಂ.ಎ. ಗಫೂರ್

ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಪೂರ್ ಹಾಗೂ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ ಮಂಜುನಾಥ್ ಪೂಜಾರಿ ಅವರ ನೇಮಕಾತಿ ಪ್ರಸ್ತಾವನೆಗೆ ಹೈಕಮಾಂಡ್ ಅನುಮೋದನೆ ನೀಡಿದೆ.

ಹಲವು ದಶಕಗಳಿಂದ ಕಾಂಗ್ರೆಸ್ ಕಾರ್ಯಕರ್ತರಾಗಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಎಂ.ಎ.ಗಫೂರ್, ಈ ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Exit mobile version