Site icon ಉಡುಪಿ ನ್ಯೂಸ್ ಪ್ಲಸ್

ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶ

ಹುಬ್ಬಳ್ಳಿ ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಸ್ಲಿಂ ನಾಯಕ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಇಂದು ವಿಧಿವಶರಾದರು. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಎಸ್.ಎಂ ಕೃಷ್ಣ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವರು. ಜಬ್ಬಾರ್ ಬಾನ್ ಹೊನ್ನಳ್ಳಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Exit mobile version