Site icon ಉಡುಪಿ ನ್ಯೂಸ್ ಪ್ಲಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾರವರ ಮೇಲೆ ಹಲ್ಲೆ ಯತ್ನ ನಡೆದಿರುವುದು ಅತ್ಯಂತ ಖಂಡನೀಯ : ಶಾಸಕ ಲಾಲಾಜಿ ಆರ್ ಮೆಂಡನ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಮಿತ್ರರಾದ ಹರೀಶ್ ಪೂಂಜಾರವರ ಮೇಲೆ ನಿನ್ನೆ ತಡರಾತ್ರಿ ತಮ್ಮ ಕೆಲಸಗಳನ್ನು ಮುಗಿಸಿ ವಾಪಸಗುತ್ತಿದ್ದಾಗ ಅವರ ಮೇಲೆ ಆಘಂತುಕರಿಂದ ಹಲ್ಲೆ ಯತ್ನ ನಡೆದಿರುವುದು ಅತ್ಯಂತ ಖಂಡನೀಯ ವಿಷಯ. ಒಬ್ಬ ಜನರಿಂದ ಆರಿಸಿ ಬಂದ ಜನಪ್ರತಿನಿಧಿಯ ಮೇಲೆ ನಡೆದಿರುವ ಈ ಕೃತ್ಯ ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ಆಗಿರುವ ಹಲ್ಲೆಯಂತೆ. ಸಮಾಜದ ಪರವಾಗಿ ಅಥವಾ ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವ ವ್ಯಕ್ತಿಗಳ ಮೇಲೆ ಇಂತಹ ಹಲ್ಲೆಗಳು ಹೆಚ್ಚಾಗುತ್ತಿದ್ದು ಇದನ್ನು ನಿಗ್ರಹ ಮಾಡಲು ಸರ್ಕಾರ ತುರ್ತು ಕ್ರಮವನ್ನ ಕೈಗೊಳ್ಳಬೇಕು. ಜೊತೆಗೆ, ಬಂಧಿತನಾಗಿರುವ ಆರೋಪಿಯ ಸಂಪೂರ್ಣ ತನಿಖೆ ನಡೆಸಿ ಆತನ ಉದ್ದೇಶ ಮತ್ತು ಆತನ ಹಿಂದಿರುವ ಕೈಗಳ ಬಗ್ಗೆ ಸಮಗ್ರ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ, ಶಾಸಕರಿಗೆ ಸರಿಯಾದ ಭದ್ರತೆಯನ್ನು ಒದಗಿಸಬೇಕು ಮತ್ತು ಇಂತಹ ಘಟನೆಗಳು ಇನ್ನು ಪುನರಾವರ್ತನೆಯಾಗದಂತೆ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಹಾಗೂ ಗೃಹ ಸಚಿವರಿಗೆ ಆರಗ ಈ ಮೂಲಕ ಅಗ್ರಹಿಸುತ್ತೇನೆ .

ಲಾಲಾಜಿ ಆರ್ ಮೆಂಡನ್
ಶಾಸಕರು
ಕಾಪು ವಿಧಾನ ಸಭಾ ಕ್ಷೇತ್ರ

Exit mobile version