Site icon ಉಡುಪಿ ನ್ಯೂಸ್ ಪ್ಲಸ್

BREAKING ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರು, ವಿನಯ್ ಕುಮಾರ್ ಸೊರಕೆ, ಮೊಹಿದಿನ್ ಬಾವ ಮಿಥುನ್ ರೈ, ಪ್ರತಿಭಾ, ಮುನೀರ್ ಸೇರಿ ನೂರಾರು ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

YouTube Poster

ಮಂಗಳೂರು:ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ವಿನಯ್ ಕುಮಾರ್ ಸೊರಕೆ, ಮೊಹಿದಿನ್ ಬಾವ  ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ,  ಸೇರಿದಂತೆ ನೂರಾರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Exit mobile version