ಕಾಪು : ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವನ್ನು ಶಿರ್ವ ಸಂತ ಮೇರಿ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ವೇಣುಗೋಪಾಲ ನೋಂಡಾ ಅವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ. ಶಾಲಾ – ಕಾಲೇಜುಗಳಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯೊಂದಿಗೆ ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಲು ಪ್ರೇರಣೆ ನೀಡಿದಂತಾಗುತ್ತದೆ ಎಂದರು. ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯ ಸಂಚಾಲಕ ಡಾ| ಕೆ. ಪ್ರಶಾಂತ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ಅಥ್ಲೆಟ್ ಶಾಲಿನಿ ಶೆಟ್ಟಿ, ಡಾ| ಸುನೀಲ್ ಹೆಗ್ಡೆ, ಆಡಳಿತಾದಿಕಾರಿ ಆಲ್ಬನ್ ರೋಡ್ರಿಗಸ್, ಕನ್ನಡ ಮಾಧ್ಯಮ ವಿಭಾಗದ ಮುಖ್ಯಸ್ಥೆ ಸರೋಜಿನಿ, ಪಿಟಿಎ ಅಧ್ಯಕ್ಷ ಮಧುಕರ್ ಎಸ್., ಉಪಾಧ್ಯಕ್ಷೆ ಲತಾ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ್ ಶೆಟ್ಟಿ ಮರೀನಾ ಸರೋಜಾ ಸೋನ್ಸ್, ಚಿತ್ರಲೇಖಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದ
video link
