ಉಡುಪಿ ನ್ಯೂಸ್ ಪ್ಲಸ್

ಬ್ರಹ್ಮಾವರ: ಬಸ್ ಡಿಕ್ಕಿ: ಪಾದಚಾರಿ ಸಾವು

ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಆಕಾಶವಾಣಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಹಂದಾಡಿಯ ಇಂದು ಶೇಖರ್ ಎಂದು ಗುರುತಿಸಲಾಗಿದೆ ಕುಂದಾಪುರದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವೇಗದೂತ ಬಸ್ ರಸ್ತೆ ದಾಟುತ್ತಿದ್ದ ಇಂದು ಶೇಖರ್ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಕಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Exit mobile version