
ಬ್ರಹ್ಮಾವರದಲ್ಲಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಾವರ ತಾಲೂಕು ಆಡಳಿತ ಸೌಧಕ್ಕೆ ಇಲಾಖಾಧಿಕಾರಿಗಳೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 17-01-2023 ರಂದು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಹನಾ, ಸಹಾಯಕ ಅಭಿಯಂತರರಾದ ಹರೀಶ್, ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ ಉಪಸ್ಥಿತರಿದ್ದರು.
