ಸ್ವಾತಂತ್ರ್ಯ ಪೂರ್ವದಲ್ಲಿ ಮಾತ್ರವಲ್ಲದೇ ಸ್ವಾತಂತ್ರ್ಯ ನಂತರೂ ಹಲವಾರು ಹೋರಾಟಗಾರರು, ಯೋಧರು ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಅವರೆಲ್ಲರ ಬಲಿದಾನವನ್ನು ನಾವು ಇಂದು ಸ್ಮರಿಸಬೇಕು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವ್ಯಕ್ತಿತ್ವ , ಆಲೋಚನೆಗಳು ಮತ್ತು ಆದರ್ಶಗಳು ನವಭಾರತ ನಿರ್ಮಾಣಕ್ಕೆ ಸ್ಪೂರ್ತಿ ನೀಡುತ್ತಲೇ ಇರುತ್ತವೆ ಎಂದು ಉಪನ್ಯಾಸಕ ಹರೀಶ್ ಕೋಟ್ಯಾನ್ ನುಡಿದರು. ನೆಹರೂ ಯುವ ಕೇಂದ್ರ, ಉಡುಪಿ, ಪಾಂಡುರಂಗ ಹವ್ಯಾಸಿ ಕಲಾ ಸಂಘ (ರಿ) ಕೆಮುಂಡೇಲು ಇದರ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪಾಂಡುರಂಗ ಹವ್ಯಾಸಿ ಕಲಾ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯರಾದ ಬಾಲಕೃಷ್ಣ ಆಚಾರ್, ಕೊಲ್ಯ , ಉದ್ಯಮಿ ಚಂದ್ರಹಾಸ್ ಭಂಡಾರಿ, ಪಾಂಡುರಂಗ ಭಜನಾ ಮಂಡಳಿ ಕಾರ್ಯದರ್ಶಿ ಕೃಷ್ಣಾನಂದ ರಾವ್ ಉಪಸ್ಥಿತರಿದ್ದರು.ಈ ಸಂಧರ್ಭದಲ್ಲಿ ಬಾಪೂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಹುತಾತ್ಮ ರಿಗಾಗಿ ಎರಡು ನಿಮಿಷ ಮೌನಾಚರಣೆ ನಡೆಸಲಾಯಿತು.ನಿಶಾಂತ್ ಕುಲಾಲ್ ಸ್ವಾಗತಿಸಿ, ಸರ್ವಜ್ಞ ರಾವ್ ವಂದಿಸಿದರು, ರಾಘವೇಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.
