Site icon ಉಡುಪಿ ನ್ಯೂಸ್ ಪ್ಲಸ್

ರೂ. 1.00 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಂತೆಕಟ್ಟೆ ಕೋಟಿ – ಚೆನ್ನಯ್ಯ ಸರ್ಕಲ್ – ಶಾಸಕ ರಘುಪತಿ ಭಟ್ ಗುದ್ದಲಿ ಪೂಜೆ

ಸಂತೆಕಟ್ಟೆ ಕಲ್ಯಾಣಪುರ ಜಂಕ್ಷನ್ ಗೆ ಕೋಟಿ – ಚೆನ್ನಯ್ಯ ವೃತ್ತ ಎಂದು ನಾಮಕರಣ ಮಾಡಲಾಗಿದ್ದು, ರೂ. 1.00 ಕೋಟಿ ವೆಚ್ಚದಲ್ಲಿ ಕೋಟಿ – ಚೆನ್ನಯ್ಯ ವೃತ್ತ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 08-03-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಗೋಪಾಲಪುರ ವಾರ್ಡಿನ ನಗರ ಸಭಾ ಸದಸ್ಯರಾದ ಮಂಜುಳಾ ನಾಯಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಪಕ್ಕಿಬೆಟ್ಟು ಗರಡಿಯ ಅಧ್ಯಕ್ಷರಾದ ವಿಠಲ್ ಪೂಜಾರಿ, ಉಪಾಧ್ಯಕ್ಷ ಪ್ರಕಾಶ್ ಪಕ್ಕಿಬೆಟ್ಟು, ಪ್ರಧಾನ ಅರ್ಚಕರಾದ ಮೋಹನ್ ಪೂಜಾರಿ, ಹಿರಿಯರಾದ ರಾಮ ಪೂಜಾರಿ, ಅಪ್ಪು ಜತ್ತನ್, ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಹಾಗೂ ಬಿಲ್ಲವ ಸೇವಾ ಸಂಘದ ಅಧ್ಯಕ್ಷರು ಪದಾಧಿಕಾರಿಗಳು, ನಗರ ಸಭಾ ಸದಸ್ಯರು, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Exit mobile version