ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಅನೆಗುಂದಿ ಮಠ, ಪಡು ಕುತ್ಯಾರು ಇಲ್ಲಿ ರ್ಮಿಸಿರುವ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆ ಹಾಗೂ ವಿದ್ಯಾರ್ಥಿ ಭವನದ ಉದ್ಘಾಟನೆಯನ್ನು ಶನಿವಾರ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ಶುಭ ರೈಸಿದರು.ಸಂದರ್ಭ ಮಹಾ ಸಂಸ್ಥಾನದ ವಿದ್ವಾನ್ ಮಂಡಳಿಗೆ ವೈದಿಕ,ಗುರುಪರಂಪರೆಗೆ ಸೇವೆ ಸಲ್ಲಿಸುತ್ತಿರುವ ವೇದ ಬ್ರಹ್ಶಶ್ರೀ ಶಂಕರಾಚಾರ್ಯ ಕಡ್ಲಾಸ್ಕರ್ ಪಂಡಿತ್ ಇವರಿಗೆ ಸಂಸ್ಥಾನದ ಆಸ್ಥಾನ ವಿದ್ವಾನ್ ಪದವಿ ಪ್ರಧಾನ ಮಾಡಲಾಯಿತು. ಶ್ರೀಮತ್ ಜಗದ್ಗುರು ಆನೆಗುಂದಿ ಸಂಸ್ಥಾನ ಸರಸ್ವತೀ ಪೀಠಾಧಿಪತಿ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಅವರು ಆಶೀರ್ವಚಿಸಿದರು. ವೇದಿಕೆಯಲ್ಲಿ ಸಂಸ್ಥಾನದ ವಿವಿಧ ೨೧ ದೇವಳದ ಮೊಕ್ತೇಸರರು, ಮುಖ್ಯ ಅಥಿತಿ ಮಿಥುನ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.
ಶ್ರೀ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನಿ ಪಾಠಶಾಲೆ – ವಿದ್ಯಾರ್ಥಿ ಭವನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ.

