ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ ದಸರಾದ ವಿದ್ಯುದ್ದೀಪಾಲಂಕಾರ ವನ್ನುಎಂಆರ್ಜಿ ಗ್ರೂಪ್ ಅಧ್ಯಕ್ಷರಾದ ಬಂಜಾರ ಪ್ರಕಾಶ್ ಶೆಟ್ಟಿ ಚಾಲನೆ ನೀಡಿದರು ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಈ ಬಾರಿಯು ಉಚ್ಚಿಲ ದಸರಾವು ಅಕ್ಟೋಬರ್ 15 ರಿಂದ 24 ರವರೆಗೆ ನಡೆಯಲಿದೆ. ಈ ಸಂದರ್ಭ ದೇವಳದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ದ. ಕ. ಮೊಗವೀರ ಮಹಾಜನ ಸಂಘ ಉಚ್ಚಿಲದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ದೇವಳದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಹಿಳಾ ಘಟಕ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕು ಪಟ್ಟ ಮೊಗವೀರ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ, ಉಪಾಧ್ಯಕ್ಷ ಸುಭಾಶ್ಚಂದ್ರ, ಕಾರ್ಯದರ್ಶಿ ಸುಧಾಕ ಕುಂದರ್, ಅನಿಲ್ ಕುಮಾರ್, ಶಂಕರ್ ಸಾಲ್ಯಾನ್, ದಿನೇಶ್ ಮೂಳೂರು, ಗಂಗಾಧರ ಸುವರ್ಣ ಎರ್ಮಾಳು, ಸತೀಶ್ ಬಾರ್ಕೂರು, ರವೀಂದ್ರ ಶ್ರೀಯಾನ್, ಸತೀಶ್ ಅಮೀನ್ ಬಾರ್ಕೂರು, ದೇವಳದ ಮುಖ್ಯ ಪ್ರಬಂಧಕ ಸತೀಶ್ ಅಮೀನ್ ಮಟ್ಟು ಉಪಸ್ಥಿತರಿದ್ದರು.
ಉಚ್ಚಿಲ ದಸರಾ 2023: ವಿದ್ಯುದ್ದೀಪಾಲಂಕಾರಕ್ಕೆ ಚಾಲನೆ

