Site icon ಉಡುಪಿ ನ್ಯೂಸ್ ಪ್ಲಸ್

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದಲ್ಲಿ ಮಹಿಳಾ ಸಂವಾದ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲದಲ್ಲಿ ಮಹಿಳಾ ಸಂವಾದ ಕಾರ್ಯಕ್ರಮ ಮಾನ್ಯ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಯವರ ನೇತ್ರತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಯವನ್ನು ಮಾನ್ಯ ವಿಧಾನ ಪರಿಷತ್ ನ ಉಪ ಸಭಾಪತಿಗಳಾದ ಶ್ರೀ ಪ್ರಾಣೇಶ್ ರವರು ಉದ್ಘಾಟಿಸಿದರು, ಸಂವಾದವನ್ನು ವಿಧಾನ ಪರಿಷತ್ ಸದಸ್ಯರುಗಳಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಹಾಗೂ ಶ್ರೀಮತಿ ಭಾರತಿ ಶೆಟ್ಟಿ ಯವರು ನಡೆಸಿಕೊಟ್ಟರು. ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷರಾದ ಶ್ರೀ ಜಿತೇಂದ್ರ ಶೆಟ್ಟಿ ಉದ್ಯಾವರ ವಹಿಸಿದ್ದರು.ಕಾರ್ಯಕ್ರಮದಲ್ಲಿ ಮಾನ್ಯ ನಿಕಟಪೂರ್ವ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್,ರಾಜ್ಯ ಬಿಜೆಪಿ ನಿಕಟಪೂರ್ವ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರೇಶ್ಮಾ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ರಮೇಶ್, ಉಪಾಧ್ಯಕ್ಷರು ಗಳಾದ ಶ್ರೀಮತಿ ಸುಮಾ ಯು ಶೆಟ್ಟಿ, ಶ್ರೀಮತಿ ಪವಿತ್ರ ಆರ್ ಶೆಟ್ಟಿ , ಹಿರಿಯ ಮಹಿಳಾ ನಾಯಕಿಯಾದ ಶ್ರೀಮತಿ ಶೀಲಾ ಕೆ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ನಳಿನಿ ಪ್ರದೀಪ್, ಉಪಾಧ್ಯಕ್ಷರಾದ ಶ್ರೀಮತಿ ಸುಜಲ,ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಎಂ.ಗೋಪಾಲಕೃಷ್ಣ ರಾವ್ ಶರಣ್ ಕುಮಾರ್ ಮಟ್ಟು ಹಾಗೂ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು, ವಿವಿಧ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

Exit mobile version