ಉಡುಪಿ: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಮಾ. 27ರ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ರು. ಇದೀಗ ಅವರ ಶವ ಸುವರ್ಣ ನದಿಯಲ್ಲಿ ಪತ್ತೆಯಾಗಿದೆ. ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿರುವ ಸುವರ್ಣ ನದಿಯಲ್ಲಿ ಫೈಝಲ್ ರವರ ಮೃತ ದೇಹ ದೊರೆತಿರುವುದಾಗಿದೆ. ಫೈಝಲ್ರವರು ಸುವರ್ಣ ನದಿಯ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದು, ಆತನ ಮರಣದಲ್ಲಿ ಸಂಶಯವಿರುವುದಾಗಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 23/2024 ಕಲಂ: 174 (3)(IV) ಕಲಂ:174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.
ಬ್ರಹ್ಮಾವರ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಸಂಶಯಾಸ್ಪದ ರೀತಿಯಲ್ಲಿ ಮೃತ್ಯು – ಶವ ಪತ್ತೆ

