ಉಡುಪಿ ನ್ಯೂಸ್ ಪ್ಲಸ್

(KPCC) ಇದರ ನೂತನ ಪ್ರಚಾರ ಸಮಿತಿಯ ರಾಜ್ಯಧ್ಯರಾದ ವಿನಯ್ ಕುಮಾರ್ ಸೊರಕೆಯವರ ಪದಗ್ರಹಣ ಮತ್ತು ಕಛೇರಿ ಉದ್ಗಾಟನೆ ಕಾರ್ಯಕ್ರಮ

ದಿನಾಂಕ 05-04-2024 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಚಾರ ಸಮಿತಿಯ ರಾಜ್ಯಧ್ಯಕ್ಷರಾಗಿ * ನೇಮಕಕೊಂಡ ಶ್ರೀ ವಿನಯ್ ಕುಮಾರ್ ಸೊರಕೆಯವರ ಪದಗ್ರಹಣ ಮತ್ತು ಕಛೇರಿ ಉದ್ಗಾಟನೆ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ *ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ರವರ ಸಮ್ಮುಖದಲ್ಲಿ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆಯಿತು..ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವುರ್ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್ N S U I ಘಟಕದ ಅಧ್ಯಕ್ಷ ಸೌರಭ್ ಬಲ್ಲಾಳ್ ಪ್ರಶಾಂತ್ ಜತನ್ನ ರಮೀಝ್ ಹುಸೇನ್ ಹಮೀದ್ ಯೂಸುಫ್, ಸಾಹುಲ್ ಹಮೀದ್ ಪಕ್ಷದ ಎಲ್ಲಾ ಹಿರಿಯ ನಾಯಕರು, ಮುಖಂಡರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version