ಉಡುಪಿ ನ್ಯೂಸ್ ಪ್ಲಸ್

ಬೆಳಪು ವ್ಯವಸಾಯ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ಉಪಾಧ್ಯಕ್ಷರಾಗಿ  ದ್ಯುಮಣಿ ಆರ್ ಭಟ್ ಅವಿರೋಧ ಆಯ್ಕೆ

ಬೆಳಪು ವ್ಯವಸಾಯ ಸಹಕಾರಿ ಸಂಘದ ಆಡಳಿತ ಮಂಡಳಿಯ ಮುಂದಿನ ಅವಧಿಗೆ ಸತತವಾಗಿ 9 ನೇ ಅವಧಿಗೆ ಅಧ್ಯಕ್ಷರಾಗಿ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹಾಗೂ ಉಪಾಧ್ಯಕ್ಷರಾಗಿ  ದ್ಯುಮಣಿ ಆರ್ ಭಟ್ ಉಚ್ಚಿಲ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಸಹಕಾರಿ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಬಳಗದ ಎಲ್ಲಾ 12 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು,  ನಿರ್ದೇಶಕರುಗಳಾಗಿ  ಪಾಂಡು ಶೆಟ್ಟಿ, ಸಾಧು ಶೆಟ್ಟಿ ಪಣಿಯೂರು, ಆಲಿಯಬ್ಬ, ಗೋಪಾಲ ಪೂಜಾರಿ, ಪಾಂಡು ಎಮ್. ಶೇರಿಗಾರ, ಸೈಮನ್ ಡಿಸೋಜ , ಶ್ರೀಮತಿ ಮೀನ ಪೂಜಾರ್ತಿ, ಶ್ರೀಮತಿ ಸುಂದರಿ, ಶ್ರೀಮತಿ ವಿಮಲ ಅಂಚನ್, ಶ್ರೀಮತಿ ಅನಿತ ಆನಂದರವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣೆಯಲ್ಲಿ ಸಹಕಾರ ಸಂಘಗಳ ಚುನಾವಣಾ ನಿರ್ವಚನಾಧಿಕಾರಿ ಕೆ. ಆರ್. ರೋಹಿತ್‌ರವರು ಚುನಾವಣಾ ಪ್ರಕ್ರಿಯೆ ನಡೆಸಿದರು.  ಈ ಸಂದರ್ಭ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಲೋಚನ ಮತ್ತು ಎಸ್‌ಸಿಡಿಸಿಸಿ ಬ್ಯಾಂಕಿನ ವಲಯ ನಿರ್ದೇಶಕ ಬಾಲಗೋಪಾಲರವರು ಉಪಸ್ಥಿತರಿದ್ದರು.

Exit mobile version