×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕೆಎಸ್‌‌ಆರ್‌‌ಟಿಸಿ ಬಸ್‌ ಮತ್ತು ಮಕ್ಕಳ ಪ್ರವಾಸದ ಬಸ್‌ ನಡುವೆ ಢಿಕ್ಕಿ : ಚಾಲಕರಿಗೆ ಗಂಭೀರ ಗಾಯ

ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ  ಕೆಎಸ್‌‌ಆರ್‌‌ಟಿಸಿ ಬಸ್‌ ಮತ್ತು  ಮಕ್ಕಳ ಪ್ರವಾಸದ ಬಸ್‌ ನಡುವೆ ಮುಖಾಮುಖೀ ಢಿಕ್ಕಿಯಾಗಿ. ಟೂರಿಸ್ಟ್‌ ಬಸ್‌ ಚಾಲಕ ಅಭಿಷೇಕ್‌ ಹಾಗೂ ಬಸ್‌ ಪ್ರಯಾಣಿಕ ದುಗೇಶ್‌ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಟೂರಿಸ್ಟ್‌ ಬಸ್‌ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದಾಗ ಕೊಕ್ಕಡ ಕಡೆಗೆ ಹೋಗುವ ಕೆಎಸ್ಸಾರ್ಟಿಸಿ ಬಸ್‌ ಢಿಕ್ಕಿ ಹೊಡೆದಿದೆ. ಚಾಲಕರ ಸಹಿತ ಬಸ್‌ನಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಶೌರ್ಯ ತಂಡದವರ ನೇತೃತ್ವದಲ್ಲಿ ಉಜಿರೆ ಹಾಗೂ ಪುತ್ತೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ನಲ್ಲಿ ಒಟ್ಟು 40 ವಿದ್ಯಾರ್ಥಿಗಳು ಹಾಗೂ ನಾಲ್ವರು ಉಪನ್ಯಾಸಕರು ಮತ್ತು ಒಬ್ಬ ಅಡುಗೆ ಸಹಾಯಕರು ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *