ಹಿರಿಯಡ್ಕದಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ‘ಗಾಂಧಿ ಭಾರತ’ ಬೃಹತ್ ಸಮಾವೇಶವನ್ನು ಹಿರಿಯಡ್ಕ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಜ.30ರಂದು ಮಧ್ಯಾಹ್ನ 3ಕ್ಕೆ ಹಮ್ಮಿಕೊಳ್ಳಲಾಗಿದೆ ಹಿರಿಯಡ್ಕ ದೇವಾಡಿಗರ ಭವನ ದಿಂದ ದೇವಸ್ಥಾನದ ವರೆಗೆ ಮಹಾತ್ಮಾ ಗಾಂಧೀಜಿ, ಅಂಬೇಡ್ಕರ್ ಅವರ ಸ್ತಬ್ಧ ಚಿತ್ರದ ಮೆರವಣಿಗೆ ನಡೆಯಲಿದೆ. ಸಭಾ ಕಾರ್ಯಕ್ರಮವನ್ನು ಸ್ಪೀಕರ್ ಯು. ಟಿ.ಖಾದರ್ ಉದ್ಘಾಟಿಸಲಿದ್ದು, ಮಾಜಿ ಸಚಿವರು ವಿನಯ್ ಕುಮಾರ್ ಸೊರಕೆ ಹಿರಿಯಡ್ಕದ ಹಿರಿಯ ಕಾಂಗ್ರೆಸ್ ಮುಖಂಡ ಜಯಂತ್ ರಾವ್ ಅಧ್ಯಕ್ಷತೆ ವಹಿಸಲಿ ದ್ದಾರೆ. ಮಾಜಿ ಸಚಿವರಾದ ಸಚಿವ ಕಿಮ್ಮನೆ ರತ್ನಾಕರ್, ಉಮಾಶ್ರೀ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ವಾಗ್ನಿಗಳಾದ ನಿಖಿತ್ ರಾಜ್ ಮೌರ್ಯ, ಸುಧೀರ್ ಮರೋಳಿ ಭಾಗವಹಿಸಲಿದ್ದಾರೆ

