×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಶ್ರೀ ಹೊಸ ಮಾರಿಗುಡಿದೇವಸ್ಥಾನ  ಬ್ರಹ್ಮಕಲಶೋತ್ಸವ : ಉತ್ತರ ವಾಹಿನಿ ಹೊರೆಕಾಣಿಕೆ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಮ್.ಎನ್.ರಾಜೇಂದ್ರ ಕುಮಾರ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.  
 ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ, ಕಾರ್ಕಳ, ಕಾಪು ತಾಲೂಕಿನಾಧ್ಯಂತ ಸಮರ್ಪಿಸಲ್ಪಡುವ ಹಸಿರು ಹೊರೆಕಾಣಿಕೆ ಪಾಂಗಾಳ ಸೇತುವೆ ಬಳಿಯಿಂದ ಹೊರಟ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ ಮೂಲಕ ಕಾಪು ಪೇಟೆಯಿಂದ ಹೊಸ ಮಾರಿಗುಡಿ ತಲುಪಿತು.  
  ಹೊರೆಕಾಣಿಕೆಯಲ್ಲಿ ಅಕ್ಕಿ, ಬೆಲ್ಲ, ಬೇಳೆ, ವಿವಿಧ ರೀತಿಯ ತರಕಾರಿಗಳು ಸಹಿತ ಇನ್ನಿತರ ದವಸ ಧಾನ್ಯಗಳು 370ಕ್ಕೂ ಅಧಿಕ ಹೊರೆಕಾಣಿಕೆ ವಾಹನಗಳಲ್ಲಿ ಹರಿದು ಬಂತು.

ಮೆರವಣಿಗೆಯಲ್ಲಿ ಕುಣಿತ ಭಜನೆ, ಮಹಿಳೆಯರ ಡೊಳ್ಳು ಕುಣಿತ, ಪುರುಷರು, ಮಹಿಳೆಯರು ಹಾಗೂ ಮಕ್ಕಳ ಭಜನಾ ತಂಡ, ಡೋಲು ವಾದನ, ತಾಲೀಮು, ಕೊಂಬು, ಬಿರುದಾವಳಿ, ಕೀಲು ಕುದುರೆ, ವಿವಿಧ ರೀತಿಯ ಟ್ಯಾಬ್ಲೋ,  ಡೋಲು, ಹುಲಿ ವೇಷ ಕುಣಿತ, ವೀರಗಾಸೆ ನೃತ್ಯ, ಚೆಂಡೆ ಸಹಿತ ವಿವಿಧ ವೇಷಗಳು ಮೆರವಣಿಗೆಯಲ್ಲಿ ರಂಗು ತಂದಿತು.

ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಸುವರ್ಣ,  ಸಾಯಿ ಈಶ್ವರ್ ಗುರೂಜಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ರಘಪತಿ ಭಟ್, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಆರ್ಥಿಕ ಸಮಿತಿ ಪ್ರಧಾನ ಸಂಚಾಲಕ ಉದಯ ಸುಂದರ ಶೆಟ್ಟಿ, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಪ್ರಮುಖರಾದ ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್ ಕುಮಾರ್ ಶೆಟ್ಟಿ, ಸಂದೀಪ್ ಶೆಟ್ಟಿ ಮುಂಬಯಿ, ಮಾಧವ ಆರ್. ಪಾಲನ್, ಭಗವಾನ್ ದಾಸ್ ಶೆಟ್ಟಿಗಾರ್‌ ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ , ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಮೋಹನ ಬಂಗೇರ, ಶಾಂತಲತಾ ಶೆಟ್ಟಿ , ಹರೀಶ್ ನಾಯಕ್ ಕಾಪು, ಶ್ರೀಕರ ಶೆಟ್ಟಿ ಕಲ್ಯ, ಅರುಣ್‌ ಶೆಟ್ಟಿ ಪಾದೂರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *