ಸಮಗ್ರ ಜೀರ್ಣೋದ್ದಾರಗೊಂಡು ಬ್ರಹ್ಮಕುಂಭಾಭಿಷೇಕ ಮಹೋತ್ಸವ ಸಡಗರದಲ್ಲಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಬುಧವಾರ ಭೇಟಿ ನೀಡಿದರು. ಅದ್ಭುತವಾಗಿ ನವೀಕರಣಗೊಂಡಿರುವ ದೇವಳದ ಕಾಮಗಾರಿ, ಶಿಲ್ಪವೈಭವ ಕಂಡು ಹರ್ಷ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಜೊತೆಗಿದ್ದರು. ದೇವಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಾಪು ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷ ಗುರ್ಮೆ ಸುರೇಶ ಶೆಟ್ಟಿ, ಡಾ.ರೋಶನ್ ಶೆಟ್ಟಿ ಮೊದಲಾದವರಿದ್ದರು.

