ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಪ್ಯಾರಮೆಡಿಕಲ್ ಕಾಲೇಜಿಗೆ ರಾಜ್ಯ ಮಟ್ಟದಲ್ಲಿ 5 ನೇ ರ್ಯಾಂಕ್ ಬಂದ್ದಿದ್ದು, ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದೆ. ಸ್ವಾತಿ ಬಿ.ಎಸ್ ಇವರು ಡಿಪ್ಲೋಮಾ ಇನ್ ಆಪರೇಷನ್ ಥೀಯೆಟರ್ ಆಂಡ್ ಅನಸ್ಟೇಶಿಯ ಕೋರ್ಸಲ್ಲಿ 5ನೇರ್ಯಾಂಕ್ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಡಾ| ಕೃಷ್ಣಪ್ರಸಾದ್ ಕೂಡ್ಲು, ಚೇರ್ಮನ್ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ ಹಾಗೂ ನಿರ್ದೇಶಕ ರಘುರಾಮ್ ರಾವ್ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ಕಳೆದ 15 ದಿನಗಳ ಹಿಂದೆ ಅಲೈಡ್ ಹೆಲ್ತ್ ಸೈನ್ಸಸ್ ಕೋರ್ಸುಗಳಲ್ಲಿ ರಾಜ್ಯಮಟ್ಟದಲ್ಲಿ 6ರ್ಯಾಂಕ್ ಗಳು ಬಂದಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಆರಂಭಗೊಂಡಿದ್ದು ಎಸೆಸೆಲ್ಸಿ ಹಾಗೂ ಪಿಯುಸಿ ಮುಗಿಸುತ್ತಿರುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸಬಹುದು

