×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಖಂಡನೀಯ : ರಮೇಶ್ ಕಾಂಚನ್

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ ಮೂವರು ಕನ್ನಡಿಗರು ಸೇರಿದಂತೆ 26 ಜನರ ಮಾರಣ ಹೋಮ ನಡೆಸಿದ ಭಯೋತ್ಪಾದಕರ ಹೇಯ ಕೃತ್ಯ ತೀರಾ ಖಂಡನೀಯ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು. ಭಯೋತ್ಪಾದಕರ ಈ ಭೀಕರ ದಾಳಿಯನ್ನು ಇಡೀ ದೇಶದ ಜನತೆ ಒಕ್ಕೊರಲಿನಿಂದ ಬಲವಾಗಿ ಖಂಡಿಸುತ್ತಿದ್ದಾರೆ. ಈ ದುರ್ಘಟನೆಯಲ್ಲಿ ಸಾವಿಗೀಡಾದವರಿಗೆ ತೀವ್ರ ಸಂತಾಪ ಸೂಚಿಸುತ್ತ ಗಾಯಗೊಂಡವರು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು. ಹಾಗೆಯೇ ಕಾಶ್ಮೀರದಲ್ಲಿ ಈ ದುರ್ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಧಿಕಾರಿಗಳ ಸಭೆ ನಡೆಸಿ ಅಲ್ಲಿನ ಮಾಹಿತಿ ಪಡೆದು ಸಚಿವ ಸಂತೋಷ್ ಲಾಡ್ ಸಹಿತ ಅಧಿಕಾರಿಗಳ ತಂಡವನ್ನು ಅಲ್ಲಿಗೆ ಕಳುಹಿಸಿ ಕನ್ನಡಿಗರ ರಕ್ಷಣೆಗೆ ಕೂಡಲೇ ಕಾರ್ಯಪ್ರವತ್ತರಾಗುವಂತೆ ಸೂಚಿಸಿರುತ್ತಾರೆ.ಈ ಘೋರ ಕೃತ್ಯದ ಹಿಂದಿರುವ ಎಲ್ಲ ದುಷ್ಟ ಶಕ್ತಿಗಳನ್ನು ಸದೆಬಡಿಯುವಲ್ಲಿ ಕೇಂದ್ರ ಸರ್ಕಾರ ಕೂಡಲೇ ಕಾರ್ಯಪ್ರವೃತ್ತರಾಗಬೇಕಾಗಿದೆ.ದೇಶ ರಕ್ಷಣೆಯ ವಿಚಾರದಲ್ಲಿ ಪಕ್ಷ, ಧರ್ಮಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಿ ರಾಷ್ಟ್ರದ ರಕ್ಷಣೆಗೆ ನಿಲ್ಲಲ್ಲಿದ್ದಾರೆ ಎಂದು ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *