ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಕೇಂದ್ರ ಗ್ರಂಥಾಲಯ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೊರಕ್ಟ್ ಘಟಕದ ಸಹಯೋಗದೊಂದಿಗೆ ಇನ್ನಂಜೆ ಎಸ್. ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪುಸ್ತಕ ವಿತರಣಾ ಅಭಿಯಾನವನ್ನು ಆಯೋಜಿಲಾಗಿತ್ತು. ಈ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯ ಪರವಾಗಿ ಕೊಡುಗೆ ನೀಡಿದ ನೋಟ್ ಬುಕ್ಗಳು, ಸ್ಟೇಷನರಿ ವಸ್ತುಗಳು ಮತ್ತು ಕೊಡೆಗಳು ಸೇರಿದಂತೆ ಅಗತ್ಯ ಕಲಿಕಾ ಸಾಮಗ್ರಿಗಳನ್ನು 30 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಇದುಅವರ ಶೈಕ್ಷಣಿಕ ಬೆಳವಣಿಗೆ ಮತ್ತು ಯೋಗ ಕ್ಷೇಮವನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಈ ಕಾರ್ಯಕ್ರಮದಲ್ಲಿ ಶ್ರೀ ಸೋದೆ ವಾದಿರಾಜ ಮಠದ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರೊ. ಡಾ. ರಾಧಾಕೃಷ್ಣಎಸ್ ಐತಾಳ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೊರಕ್ಟ್ ಘಟಕದ ಸಂಯೋಜಕ ಸಚಿನ್ ಪ್ರಭು, ಎಸ್ಎಮ್ ವಿ ಐ ಟಿ ನ ಗ್ರಂಥಪಾಲಕ ದೀಪಕ್ ಎಸ್ ಮತ್ತು ಇನ್ನಂಜೆ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ನಟರಾಜ್ ಉಪಾಧ್ಯಾಯ ಉಪಸ್ಥಿತರಿದ್ದರು.

