×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸಮಾಜವಾದ ಮತ್ತು ಜಾತ್ಯಾತೀತ ಪದಗಳು ಭದ್ರ ಬುನಾದಿಯ ಅಡಿಗಲ್ಲುಗಳಾಗಿವೆ. ಇದನ್ನು ಕೀಳಲು ಹೊರಟರೆ ದೇಶದಲ್ಲಿ ಜನಾಂಧೋಲನವೆದ್ದು ಬಿಜೆಪಿ ತನ್ನ ಅಸ್ತಿತ್ವವನ್ನೆ ಕಳೆದುಕೊಳ್ಳಲಿದೆ – ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ

ತುರ್ತು ಪರಿಸ್ಥಿತಿಯ ಸಂದರ್ಭ ಸಂವಿಧಾನದ ಪೀಠಿಕೆಗೆ ಸೇರಿಸಲಾದ ಸಮಾಜವಾದ ಮತ್ತು ಜಾತ್ಯಾತೀತ ಪದಗಳು ಭಾರತ‌ದ ಪ್ರಜಾತಂತ್ರ ವ್ಯವಸ್ಥೆ ಪ್ರತಿಪಾದಿಸುವ ಸಮಾನತೆ, ಸೌಹಾರ್ಧತೆ ಮತ್ತು ಸಮಗ್ರ ಅಭಿವೃದ್ಧಿಯ ಸಾಮಾಜಿಕ ನ್ಯಾಯದ ಭದ್ರ ಬುನಾದಿಯ ಅಡಿಗಲ್ಲುಗಳಾಗಿವೆ. ಇದನ್ನು ಕೀಳಲು ಹೊರಟರೆ ದೇಶದಲ್ಲಿ ಜನಾಂಧೋಲನವೆದ್ದು ಬಿಜೆಪಿ ತನ್ನ ಅಸ್ತಿತ್ವವನ್ನೆ ಕಳೆದುಕೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದ ‌‌‌‌ಬಹು:ಶ ಕಳೆದ ಶತಮಾನದ 70ರ ದಶಕದ ಆದಿಭಾಗದಲ್ಲಿ ದೇಶದಲ್ಲಿ ಉಂಟಾದ ಆಂತರೀಕ ರಾಜಕೀಯ ಮತ್ತು ಸಾಮಾಜಿಕ ಪಲ್ಲಟಗಳು, ಪರಿಣಾಮವಾಗಿ ಉಂಟಾದ ಬಂಡವಾಳಶಾಹಿ ಪ್ರವೃತ್ತಿಯ ಸಮಾಜವಾದಿ ಮುಖವಾಡದ ಆಂಧೋಳನಗಳು ಪ್ರತಿಭಟನೆಗಳು, ಉಗ್ರವಾದಿ ಚಟುವಟಿಕೆಗಳು ಅಂಬೇಡ್ಕರ್ ಸಂವಿಧಾನದ ಆಶಯ ತತ್ವ ಸಿದ್ಧಾಂತಗಳನ್ನು ಅಣಕಿಸುವಂತಿತ್ತು. ದೇಶದಲ್ಲಿ ತಳಹಂತದ ವರ್ಗಕ್ಕೆ ನೈಜ ಸಾಮಾಜಿಕ ನ್ಯಾಯವನ್ನು ಒದಗಿಸುವುದು ಅನಿವಾರ್ಯ ಆಗಿತ್ತು. ದೇಶದ ಸಂಪತ್ತಿನ ಸಮಾನ ಹಂಚಿಕೆ, ಶಿಕ್ಷಣದ ಅವಕಾಶ , ಉಧ್ಯೋಗ ಸೃಷ್ಠಿ, ಅಸ್ಪರ್ಶತೆ ನಿವಾರಣೆಯೇ ಮೊದಲಾದ ಜನಪರ ಕೆಲಸಗಳು ಆಳುವ ಸರಕಾರದ ಆಧ್ಯತೆಗಳಾಗಿ ಹೊರಹೊಮ್ಮಿದವು. ಇದಕ್ಕೆ ಪೂರಕವಾಗಿ ಪ್ರಧಾ‌ನಿ ಇಂದಿರಾಗಾಂಧಿಯವರಿಗೆ ಅಂದು ವಿನೋಭಾ ಭಾವೆಯವರು ಹಮ್ಮಿಕೊಂಡಿದ್ದ ಭೂಧಾನ ಚಳವಳಿ ಸ್ಪೂರ್ತಿಯಾಗಿ ಧೈರ್ಯ ತುಂಬಿತ್ತು. ಆ ನೆಲೆಯಲ್ಲಿ ಸಮಾಜಿಕ ಅಭ್ಯುದಯವನ್ನು ಗುರಿಯಾಗಿಸಿ 20ಅಂಶ ಕಾರ್ಯಕ್ರಮವನ್ನು ದೇಶಾದ್ಯಂತ ಜಾರಿಗೊಳಿಸುವ ನಿಟ್ಟಿನಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನದ ಪೀಠಿಕೆಗೆ ಸಮಾಜವಾದ ಮತ್ತು ಜಾತ್ಯಾತೀತ ಪದಗಳನ್ನು ಸೇರಿಸಲಾಯಿತು. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿರುವ ಕಾಂಗ್ರೆಸ್ ಅಂದಿನ 20 ಅಂಶ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ವಿಶ್ವದ ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಬಂದು ನಿಂತಿತ್ತು ಎಂದಿದೆ. 1949ರಲ್ಲಿ ಜಾರಿಗೆ ಬಂದಂದಿನಿಂದ ಇಂದಿನವರೆಗೆ ಬಿಜೆಪಿಯ ಮೂಲಭೂತವಾದಿ ಚಿಂತನಾ ಕಮ್ಮಟ ಅಂಬೇಡ್ಕರ್ ಪ್ರತಿಪಾದಿಸಿದ ಈ ದೇಶದ ಸಂವಿಧಾನವನ್ನು ವಿರೋದಿಸುತ್ತಲೇ ಬಂದಿದೆ. ಲೋಕಸಭೆಯಲ್ಲಿ 400 ಸದಸ್ಯ ಬಲಹೊಂದಿ ಮನುಸ್ಮೃತಿ ಯನ್ನು ದೇಶದ ಸಂವಿಧಾವನ್ನಾಗಿ ಜಾರಿಗೆ ತರುವುದು ಈ ಮನುವಾದಿ ಸಾರ್ವಾರ್ಕಾರ್, ಗೋಳ್ವಾರ್ಕಾರ್ ಶಿಷ್ಯಂದಿರ ಗುಪ್ತ ರಾಜಕೀಯ ಕಾರ್ಯಸೂಚಿಯಾಗಿದೆ. ಆ ನೆಲೆಯಲ್ಲಿ ಸಂವಿಧಾನದ ಪೀಠಿಕೆಗೆ ಸೇರಿಸಲಾದ ಸಹಬಾಳು ಸಮಪಾಲು ಸಿದ್ಧಾಂತದ ಸಮಾಜವಾದ, ಸರ್ವ ಧರ್ಮ ಸಮನ್ವಯತೆಯ ಗುರಿಹೊಂದಿದ ಜಾತ್ಯತೀತತೆ ಇವರಿಗೆ ದೇಶದ್ರೋಹವಾಗಿ ಕಾಣುತ್ತದೆ. ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *