ಕರ್ನಾಟಕ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿಯು ಸುಳ್ಳು ಆರೋಪ ಮಾಡುತ್ತಿರುವುದು ಮತ್ತು ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಶುಕ್ರವಾರ ಮುದರಂಗಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಮುದರಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಡೇವಿಡ್ ಡಿಸೋಜಾ ಅವರ ಸಂಯೋಜನೆಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ಕೇಂದ್ರ ದ ಬಿಜಿಪಿ ಸರಕಾರವು ವಚನ ಭಾಗ್ಯ ವನ್ನು ಜನರಿಗೆ ನೀಡಿದೆ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಯೋಜನೆಯನ್ನು ಜನರಿಗೆ ನೀಡಿದೆ ಮನ್ಮೋಹನ್ ಸಿಂಗ್ ಪ್ರದಾನ ಮಂತ್ರಿಯ ಸಮಯದಲ್ಲಿ 72 ಸಾವಿರ ಕೋಟಿ ರೈತರ ಸಾಲ ಮನ್ನ ಮಾಡಿದೆ ನಾವು ಸಂವಿದಾನ ಮತ್ತು ಗ್ಯಾರಂಟಿ ಯೋಜನೆಯನ್ನು ಉಳಿಸಿಕೊಳ್ಳ ಬೇಗು ಹಕ್ಕು ಪತ್ರಗಳು ಕೈ ಗೆ ಸಿಗುವಂತಾಗಬೇಕು ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಗ್ರಾಮಸ್ಥರಿಗೆ ಇದರ ಬಗ್ಗೆ ಸತ್ಯ ತಿಳುವಳಿಕೆಯನ್ನು ನೀಡುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು ಈ ಸಂದರ್ಭದಲ್ಲಿ ವೈ. ಸುಕುಮಾರ್ ಅಧ್ಯಕ್ಷರು – ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ.)ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಿಯಾಝ್ ಕಾಪು ದಿವಾಕರ ಶೆಟ್ಟಿ ಬಾಲಚಂದ್ರ ಶೆಟ್ಟಿ ರಿಯಾಜ್ ಮತ್ತು ಕಾಂಗ್ರೆಸ್ ಸದಸ್ಯರುಗಳು ಉಪಸ್ಥಿತರಿದ್ದರು.

