ಎರ್ಮಾಳು : ಶ್ರೀ ಜನಾರ್ಧನ ದೇವಸ್ಥಾನ ಹಾಗೂ ಶ್ರೀ ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ (ರಿ) ಎರ್ಮಾಳು ವತಿಯಿಂದ 2024-25ರ ಶೈಕ್ಷಣಿಕ ವರ್ಷದಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಗಳಿಸಿದ 5ನೇ ತರಗತಿಯಿಂದ ಪಿಯುಸಿವರೆಗಿನ ಎರ್ಮಾಳು ತೆಂಕ ಹಾಗೂ ಬಡಾ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪುರಸ್ಕಾರ ನೀಡಿ, ಸನ್ಮಾನಿಸಲಾಯಿತು ಕಾರ್ಯಕ್ರಮವನ್ನು ಎರ್ಮಾಳು ಜನಾರ್ಧನ ದೇವಳದ ಅರ್ಚಕರಾದ ವಿಷ್ಣುಮೂರ್ತಿ ಭಟ್ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವುದರ ಜೊತೆಗೆ ಅವರಿಗೆ ನೀಡುವ ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿಸುತ್ತದೆ. ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕವಾಗಿ ಸಮಾಜದ ಋಣ ತೀರಿಸುವ ಕಾರ್ಯ ಸಮಿತಿ ಮಾಡುತ್ತಿದೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾಠ್ಯಕ್ರಮ ದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.. ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ. ಪ್ರತಿಭಾನ್ವಿತರಿಗೆ ಹಮ್ಮಿಕೊಳ್ಳುವ ಪುರಸ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಭದ್ರ ಬುನಾದಿಯಾಗಲಿದೆ. ಎಂದರು. ಜನಾರ್ಧನ ಜನ ಕಲ್ಯಾಣ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಜಿ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, 2007 ರಲ್ಲಿ ಸ್ಥಾಪಿಸಲ್ಪಟ್ಟ ನಮ್ಮ ಟ್ರಸ್ಟ್, ದೇವಳದ ಏಳಿಗೆಯ ಜೊತೆಗೆ ಪರಿಸರದ ವಿದ್ಯಾರ್ಥಿಗಳಿಗೆ ಕಲಿಕೆಗೆ ನೆರವಾಗುವ ಉದ್ದೇಶ ನಮ್ಮದು. ವಿದ್ಯಾರ್ಥಿಗಳು ಋಣಾತ್ಮಕವನ್ನು ಯೋಚಿಸದೆ ಧನಾತ್ಮಕ ಚಿಂತೆಯ ಮೂಲಕ ಜೀವನದಲ್ಲಿ ಮುಂದೆ ಬರಬೇಕು ಎಂದು ಹೇಳಿದರು. ಸಿ.ಎ.ಪರೀಕ್ಷೆಯಲ್ಲಿ ತೇರ್ಗಡೆಯಾದ ಅನುಷಾ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. 2024-25ರ ಶೈಕ್ಷಣಿಕ ವರ್ಷದಲ್ಲಿ ಶೇ. 80ಕ್ಕಿಂತ ಅಧಿಕ ಅಂಕ ಗಳಿಸಿದ 5ನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಉಪಾಧ್ಯಕ್ಷ ರತ್ನಾಕರ ಶೆಟ್ಟಿ, ಶಿವಪ್ರಸಾದ್ ಶೆಟ್ಟಿ ಎಲ್ಯದಡಿ, ಶಶಿಧರ ಶೆಟ್ಟಿ, ಯಶೋಧರ ಶೆಟ್ಟಿ, ಜ್ಯೋತಿ ಶೆಟ್ಟಿ, ಸಂತೋಷ್ ಶೆಟ್ಟಿ ಬರ್ಪಾಣಿ, ರಾಕೇಶ್ ಎಲ್ ಶೆಟ್ಟಿ, ತೆಂಕ ಗ್ರಾ.ಪಂ ಅಧ್ಯಕ್ಷೆ ಸುರೇಖ, ಸಮಿತಿಯ ಟ್ರಸ್ಟಿಗಳು ಉಪಸ್ಥಿತರಿದ್ದರು. ಅಮೃತ ಪ್ರಾರ್ಥಿಸಿದರು. ಸುರೇಶ್ ಜಿ ಶೆಟ್ಟಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿದರು. ಓಂಕಾರ್ ಕಲಾ ಸಂಗಮ ಪಡುಬಿದ್ರಿ ಇವರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

