×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

“ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಆವರಣದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. , “ನಮ್ಮ ಮೈತ್ರಿ ನಾಯಕ ಶಿಬು ಸೊರೇನ್ ಅವರ ನಿಧನವಾದ ಕಾರಣಕ್ಕೆ ಆಗಸ್ಟ್ 5ರಂದು ನಡೆಸಬೇಕಾಗಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 8ರ ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದು, ಚುನಾವಣೆ ಸಮಯದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ದಾಖಲೆಗಳ ಸಮೇತ ಆಯೋಗಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ” ಎಂದು ತಿಳಿಸಿದರು. ಆಯೋಗಕ್ಕೆ ಯಾವ ದಾಖಲೆಗಳನ್ನು ನೀಡುತ್ತೀರಿ ಎಂದು ಕೇಳಿದಾಗ, “ಈ ವಿಚಾರವನ್ನು ನಾನು ಬಹಿರಂಗಪಡಿಸುವುದಿಲ್ಲ. ಇದು ರಾಷ್ಟ್ರೀಯ ವಿಚಾರ ಆಗಿರುವ ಹಿನ್ನೆಲೆಯಲ್ಲಿ ನಮ್ಮ ನಾಯಕರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ” ಎಂದು ತಿಳಿಸಿದರು. ಮೆರವಣಿಗೆ ನಡೆಯಲಿದೆಯೇ ಎಂದು ಕೇಳಿದಾಗ, “ಸ್ವಾತಂತ್ರ್ಯ ಉದ್ಯಾನದಲ್ಲಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಯಲಿದೆ” ಎಂದು ತಿಳಿಸಿದರು ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಸಚಿವರಾದ ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ರಾಮಲಿಂಗರೆಡ್ಡಿ, ಕೃಷ್ಣ ಬೈರೇಗೌಡ, ಡಾ ಶರಣ್ ಪ್ರಕಾಶ್ ಪಾಟೀಲ್, ವೆಂಕಟೇಶ್, ಬೋಸರಾಜ್, ಡಾ ಎಂ ಸಿ ಸುಧಾಕರ್, ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್, ರಹೀಮ್ ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *