×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ಹಲ್ಲೆ ಪ್ರಕರಣ ಅಂಬೇಡ್ಕರ್ ಯುವ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಖಂಡನೆ

ಇತ್ತೀಚೆಗೆ ಧರ್ಮಸ್ಥಳದಲ್ಲಿ ಯೂಟ್ಯೂಬರ್ಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವುದನ್ನು ಅಂಬೇಡ್ಕರ್ ಯುವ ಸೇನೆ ಉಡುಪಿ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಯವರು ತೀರ್ವವಾಗಿ ಖಂಡಿಸಿದ್ದಾರೆ. ರವಿವಾರ ಹಲ್ಲೆಗೊಳಗಾದ ಯೂಟ್ಯೂಬರ್‌ಗಳನ್ನು ಬೆಳ್ತಂಗಡಿಯಲ್ಲಿ ಭೇಟಿಯಾಗಿ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವ ಜೊತೆಗೆ ಮಾಧ್ಯಮ ರಂಗದ ಮೇಲೆ ಗೂಂಡಾಗಿರಿ ನಡೆಸಿದವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು. ಸಮಾಜದ ಅಂಕು ಡೊಂಕನ್ನು ದಿಟ್ಟ ಹಾಗೂ ನೇರವಾಗಿ ವರದಿ ಮಾಡುವ ಯೂಟ್ಯೂಬರ್ಗಳ ಮೇಲೆ ದೌರ್ಜನ್ಯ ನಡೆಸುವ ಮೂಲಕ ಪ್ರಕರಣವನ್ನು ದಿಕ್ಕು ತಪ್ಪಿಸುವ ಶ್ರಡಾಂತರಮೇಲ್ನೋಟಕ್ಕೆ ಸಾಬೀತಾಗಿದೆ. ಉದ್ದೇಶಪೂರ್ವಕವಾಗಿ ಪೂರ್ವಯೋಜಿತವಾಗಿ ಈ ಹಲ್ಲೆ ಕೇವಲ ಯೂಟ್ಯೂಬರ್ಗಳ ಮೇಲೆ ಮಾಡಿದ್ದಲ್ಲ ಸಂವಿಧಾನದ ಹಕ್ಕನ್ನು ಎತ್ತಿ ಹಿಡಿಯುವ ಎಲ್ಲರನ್ನೂ ಬೆದರಿಸುವ ತಂತ್ರ ಈ ಘಟನೆ ಸಾಬೀತು ಪಡಿಸುತ್ತದೆ. ಹಲ್ಲೆಗೊಳಗಾದವರನ್ನು ಭೇಟಿ ನೀಡಿದ ನಿಯೋಗದಲ್ಲಿ ಅಂಬೇಡ್ಕರ್ ಯುವ ಸೇನೆಯ ನಿಕಟಪೂರ್ವ ಅಧ್ಯಕ್ಷ ಹರೀಶ್ ಸಾಲ್ಯಾನ್, ಪದಾಧಿಕಾರಿಗಳಾದ ರವಿರಾಜ್ ಲಕ್ಷ್ಮೀನಗರ, ಸತೀಶ್ ಕಪ್ಪೆಟ್ಟು, ವಿಶ್ವನಾಥ್ ಹಾಳೆಕಟ್ಟೆ, ಅಂಬೇಡ್ಕರ್ ಸೇನೆ (ರಿ.) ಜಿಲ್ಲಾಧ್ಯಕ್ಷ ಸತೀಶ್ ಕಂಚುಗೋಡು, ಕ.ದ.ಸಂ.ಸ ಜೈ ಭೀಮ್ ನೀಲಿ ಪಡೆ ಪ್ರಧಾನ ಸಂಚಾಲಕ ಜಗದೀಶ್ ಗಂಗೊಳ್ಳಿ, ಬೀಮ್ ಆರ್ಮಿ, ಚಿಕ್ಕಮಂಗಳೂರು ಜಿಲ್ಲಾ ಸಂಚಾಲಕರು ಜಗದೀಶ್ ಚಿಕ್ಕಮಂಗಳೂರು, ಅಂಬೇಡ್ಕರ್ ಸೇನೆ, ಕಾರ್ಕಳ ಹರೀಶ್ ಕೊಂಡಾಡಿ, ಗಣೇಶ್ ಕೌಡೂರು, ಕಿರಣ್ ಕೌಡೂರು, ಸುಧೀರ್ ಬೈಲೂರು, ಸಂಜೀವ ಕೌಡೂರು ಹಾಗೂ ಇನ್ನಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *