ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ. ಇಂದು ದಿನಾಂಕ 29.08.2025 ರಂದು ಕುಟುಂಬ ಸಮೇತ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ದೇವಸ್ಥಾನದ ವಾಸ್ತು, ಕಲ್ಲಿನ ಕೆತ್ತನೆ, ಮರದ ಕೆತ್ತನೆ ಹಾಗೂ ದೇವಸ್ಥಾನದ ಸ್ವಚ್ಛತೆಯನ್ನು ನೋಡಿ ಮೆಚ್ಚುಗೆ ಸೂಚಿಸಿ, ದೇವಸ್ಥಾನದಲ್ಲಿ ಇದೇ ಬರುವ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯುವ ದಸರಾ ಉತ್ಸವಕ್ಕೆ ಜಿಲ್ಲಾಡಳಿತ ವತಿಯಿಂದ ಸರ್ವ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಯ ಅಧ್ಯಕ್ಷರಾದ ಗಿರಿಧರ್ ಸುವರ್ಣ, ದಿನೇಶ್ ಎರ್ಮಾಳ್, ರಾಘವೇಂದ್ರ ಉಪಾಧ್ಯಾಯ, ಬಾಲಕೃಷ್ಣ ಪೂಜಾರಿ, ಲಾಲಾಜಿ ಕುಂದರ್ ಹಾಗೂ ದೇವಸ್ಥಾನದ ವ್ಯವಸ್ಥಾಪಕರಾದ ಸತೀಶ್ ಅಮೀನ್ ಪಡುಕರೆ ಮುಂತಾದವರು ಉಪಸ್ಥಿತರಿದ್ದರು.

