:ಸರಕಾರಿಮಾದರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ತೆಂಕ ಇದರ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಫೆ. 14ರಂದು ಶಾಲೆಯ ಮೈದಾನದಲ್ಲಿ ನಡೆಯಿತು. ಉದ್ಘಾಟನೆಯನ್ನು ಶಾಲಾ ಹಳೆ ವಿದ್ಯಾರ್ಥಿ ಡಾ. ವೈ.ಎನ್. ಶೆಟ್ಟಿ ನೆರವೇರಿಸಿದರು

ಈ ಸಂದರ್ಭದಲ್ಲಿ ಎರ್ಮಾಳು ಹಳೆ ವಿದ್ಯಾರ್ಥಿ ಸಂಘ ದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ ಎಲ್ಲಾ ಹಳೆ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಶಾಲೆಯನ್ನ ಇನ್ನೆಷ್ಟು ಅಭಿವೃದ್ಧಿಪಡಿಸಬೇಕು ಶಾಲೆಗೆ ಬರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಜಾಸ್ತಿ ಮಾಡಬೇಕು ಕನ್ನಡ ಶಾಲೆಯನ್ನ ಉಳಿಸಬೇಕು ಎಂಬ ಉದ್ದೇಶದಿಂದ ನಾವು ಇವತ್ತು ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಕಾರ್ಯಕ್ರಮವನ್ನು ಮಾಡಿದ್ದೇವೆ ಆಂಗ್ಲ ಮಾಧ್ಯಮ ಶಾಲೆಯ ವ್ಯಾಮೋಹದಿಂದ ಕನ್ನಡ ಶಾಲೆಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಅಧ್ಯಾಪಕ ವೃಂದದವರು ಹಳೆ ವಿದ್ಯಾರ್ಥಿಗಳು ಗ್ರಾಮಸ್ಥರು ಇವರೆಲ್ಲರೂ ಸೇರಿ ಈ ಶಾಲೆಯನ್ನು ಉಳಿಸುವ ಎಂದು ಈ ಸಂದರ್ಭದಲ್ಲಿ ತಿಳಿಸಿದರು
ಕಾರ್ಯಕ್ರಮದಲ್ಲಿ ಜಿ. ಪಂ. ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ತೆಂಕ ಗ್ರಾಮ ಪಂಚಾಯತದ ಅಧ್ಯಕ್ಷೆ ಸುರೇಖಾ, ಉಪಾಧ್ಯಕ್ಷೆ ಕಸ್ತೂರಿ ಪ್ರವೀಣ್, ಮಾಜಿ ತಾ. ಪಂ. ಸದಸ್ಯೆ ಶಾರದ ಕೆ. ಪೂಜಾರಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ,ರತ್ನಾಕರ ಕೋಟ್ಯಾನ್ ವೈ ಗೋಪಾಲ ಶೆಟ್ಟಿ ವೈ ಗಣಪತಿ ಭಟ್, ಮುಸ್ತಾಕ್ ಸಾಹೇಬ್, ಜ್ಯೋತಿ ಶೆಟ್ಟಿ ಕೇಶವ ಎರ್ಮಾಳು ಪ್ರಶಾಂತ್ ಎರ್ಮಾಳು ಮತ್ತು ಸಮಿತಿಯ ಪದಾಧಿಕಾರಿಗಳು, ಹಾಗೂ ಹಳೆ ವಿದ್ಯಾರ್ಥಿಗಳು, ಭಾಗವಹಿಸಿದರು.


