ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ ಬಿಲ್ಲಾಡಿ, ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ (ರಿ.) ಉಡುಪಿ, ಇದರ ಅಂಗಸಂಸ್ಥೆ. ಮತ್ತು ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಕಚೇರಿ ಮೈಸೂರು ಇವರುಗಳ ಸಹಯೋಗದಲ್ಲಿ ದಿನಾಂಕ 17-03-2026 ರಂದು ಅಮೃತ್ ಗಾರ್ಡನ್ ನಲ್ಲಿ ನಡೆಯುತ್ತಿರುವ,
“ಬೃಹತ್ ಅಪ್ರೆಂಟಿ ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ” ಇದರ ಪೂರ್ವಭಾವಿ ಸಭೆಯು ಇಂದು ದಿನಾಂಕ 06-03-2026 ರಂದು ಶಿವಗಿರಿ ಹಾಲ್ ಬನ್ನಂಜೆ ಶ್ರೀ ನಾರಾಯಣ ಗುರು ಮಂದಿರ ಉಡುಪಿಯಲ್ಲಿ “ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ” ಅವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ಈ ಪೂರ್ವಭಾವಿ ಸಭೆಯಲ್ಲಿ
ಅಪ್ರೆಂಟಿ ಶಿಪ್ ಮೇಳ ಮತ್ತು ಉದ್ಯೋಗ ಮೇಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ಶ್ರೀ ಕೆ.ರಘುಪತಿ ಭಟ್ ರವರು ಭಾಗವಹಿಸಿದರು.

