×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ | ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ

ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಫೆಬ್ರವರಿ 25 ನೇ ತಾರೀಕಿನಂದು ಕಾರ್ಕಳಕ್ಕೆ ಆಗಮಿಸಿದ್ದು ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷಕದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಮಾಜಿ ಮುಖ್ಯಮಂತ್ರಿಗಳಾದ ಡಾ. ಎಮ್. ವೀರಪ್ಪ ಮೊಯಿಲಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರವನ್ನು ನೀಡಿದ್ದರು.

ಈ ಸಂದರ್ಭದಲ್ಲಿ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುದಾನ ನೀಡುವ ಭರವಸೆಯನ್ನು ನೀಡಿದ್ದರು, ಅದರಂತೆ ಕೇವಲ ಒಂದು ತಿಂಗಳ ಅವಧಿಯಲ್ಲಿ ಅಲ್ಪ ಸಂಖ್ಯಾತ ಇಲಾಖೆಯ ಮೂಲಕ 1.59 ಕೋಟಿ ರೂಪಾಯಿಗಳ ಅನುದಾನವನ್ನು ಮೊದಲ ಹಂತದಲ್ಲಿ ಬಿಡುಗಡೆಗೊಳಿಸಿದ್ದಾರೆ. ಕೊಟ್ಟ ಮಾತಿನಂತೆ ಅನುದಾನವನ್ನು ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾರ್ಕಳ ಜನತೆಯ ಪರವಾಗಿ ಉದಯ ಶೆಟ್ಟಿ ಮುನಿಯಾಲು ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *