ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪದಪ್ರದಾನ ಪಡುಬಿದ್ರಿ, ಮೇ 7: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ನೂತನ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಹಾಗೂ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭವು ಮೇ 10ರಂದು ಸಂಜೆ 5ಗಂಟೆಗೆ ಹೆಜಮಾಡಿ ಬಿಲ್ಲವರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು –
ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಪ್ರಚಾರ ಸಮತಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿ ನಂತರ ಮಾತನಾಡಿದ ಅವರುಪಕ್ಷದ ಬಲವರ್ಧನೆಯೇ ನಮ್ಮ ಗುರಿ”ಕಾರ್ಯಕರ್ತರೇ ಪಕ್ಷದ ಶಕ್ತಿಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ನಿಜವಾದ ಆಸ್ತಿ. ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸುವುದು ನಮ್ಮ ಮೊದಲ ಆದ್ಯತೆ. ಪ್ರತಿಯೊಬ್ಬ ಪದಾಧಿಕಾರಿಯೂ ಜವಾಬ್ದಾರಿಯಿಂದ ಕೆಲಸ ಮಾಡಬೇಕುಸರ್ಕಾರದ ಯೋಜನೆಗಳ ಪ್ರಚಾರ:

ಸರ್ಕಾರದ ಜನಪರ ಯೋಜನೆಗಳನ್ನು ಮತ್ತು ಗ್ಯಾರಂಟಿ ಯೋಜನೆಗಳನ್ನು ಹಳ್ಳಿಯ ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ. ಫಲಾನುಭವಿಗಳಿಗೆ ಸರಿಯಾದ ಮಾಹಿತಿ ನೀಡಿ, ಅರ್ಹರಿಗೆ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.ಒಗ್ಗಟ್ಟಿನ ಮಂತ್ರ:
“ಭಿನ್ನಾಭಿಪ್ರಾಯಗಳನ್ನು ಮರೆತು ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗಾಗಿ ಇಂದಿನಿಂದಲೇ ಸಿದ್ಧತೆ ಆರಂಭಿಸಬೇಕು,” ಎಂದು ಅವರು ತಿಳಿಸಿ.ಕಾರ್ಯಕರ್ತರಿಗೆ ಹೊಸ ಹುರುಪು ತುಂಬಿದರು ಈ ಸಂದರ್ಭದಲ್ಲಿ
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ದಕ್ಷಿಣದ ಅಧ್ಯಕ್ಷ ವೈ. ಸುಕುಮಾರ್, ಕಾಪು ತಾಲೂಕು ಗ್ಯಾರಂಟಿ ಕೋ ಆರ್ಡಿನೇಟರ್ ಗಳಾದ ನವೀನ್ ಚಂದ್ರ ಜೆ. ಶೆಟ್ಟಿ ಅಬ್ದುಲ್ ಅಝೀಜ್ ಹೆಜಮಾಡಿ, ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕೇಸರ ದಯಾನಂದ ಹೆಜಮಾಡಿ, ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ ಧಾರಗ ಆಲಡೆಯ ಆಡಳಿತ ಮೊಕೇಸರ ಸುರೇಶ್ * ಶೆಟ್ಟಿ ಕಾಂಗ್ರೆಸ್ ಮುಖಂಡ ಗುಲಾಂ ಮೊಹಮ್ಮದ್ ಹೆಜಮಾಡಿ, ಉದ್ಯಮಿ ರಾಲ್ಲಿ ಡಿ’ಕೋಸ್ಟ ಎಚ್. ಪರಮೇಶ್ವರ್, ವಿಕ್ರಮ್ ರಾಜ್, ಜಗದೀಶ್ ಆಚಾರ್ಯ ಪಡುಬಿದ್ರಿ, ರಾಜು ಎಚ್., ಸಂಜೀವ ಟಿ., ನಿರ್ಮಲಾ ಹೆಜಮಾಡಿಭಾಗವಹಿಸ ಮುಂತಾದವರು ಉಪಸ್ಥಿತರಿದ್ದರು ಲಿದ್ದಾರೆ.ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ ಸಭಾಧ್ಯಕ್ಷತೆ ವಹಿಸಲಿದ್ದರು

