
ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಹಾಗು ಮುಖಂಡರ ಬಂಧನವನ್ನು ವಿರೋಧಿಸಿ ಪಿಎಫೈ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ೬೬ ರ ಕಾಪುವಿನಲ್ಲಿ ಗುರುವಾರ ರಸ್ತೆ ತಡೆ ನಡೆಸಿದರು. ಯಾವುದೇ ರೀತಿಯಲ್ಲಿ ಪೊಲೀಸ್ ಅನುಮತಿ ಪಡೆಯದೆ ಹೆದ್ದಾರಿ ತಡೆ ನಡೆಸಿದ ಪಿಎಫೈ ಜಿಲ್ಲಾಧ್ಯಕ್ಷ ಫಯಾಝ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಪು ವೃತ್ತ ನಿರೀಕ್ಷ ಕೆ.ಸಿ ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀ ಶೈಲ ಮುರಗೋಡ ಹಾಗು ಸಿಬ್ಬಂದಿಗಳು ಸ್ಥಳದಲ್ಲಿ ಬಂದೊಬಸ್ತು ನಡೆಸಿದರು.
video link

