

ದಿನಾಂಕ 09 ಅಕ್ಟೋಬರ್ 22 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಮೂಳೂರು ವಲಯ ಇದರ ವತಿಯಿಂದ ಅಂಬುಲೆನ್ಸ್ ಹಸ್ತಾಂತರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಪಕ್ಷದ ಸಮಾಜಸೇವೆಯನ್ನು ಗುರುತಿಸಿಕೊಂಡು ದಾನಿಗಳು ಜಾತಿ-ಮತ ಭೇದವಿಲ್ಲದೆ ಸಾರ್ವಜನಿಕರ ಸೇವೆಗಾಗಿ ಆಂಬುಲೆನ್ಸ್ ಅನ್ನು SDPI ಮೂಳೂರು ವಲಯಕ್ಕೆ ಹಸ್ತಾಂತರಿಸಲಾಯಿತು . ಆಂಬುಲೆನ್ಸ್ ಉದ್ಘಾಟನೆಯನ್ನು SDPI ರಾಜ್ಯ ಸಮಿತಿ ಸದಸ್ಯರು ಹಾಗೂ SDPI ಉಡುಪಿ ಜಿಲ್ಲಾ ಉಸ್ತುವಾರಿಯಾದ ಅಥಾವುಲ್ಲಾ ಜೋಕಟ್ಟೆ ನೆರವೇರಿಸಿದರು .ತದನಂತರ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡ 30 ಕ್ಕೂ ಅಧಿಕ ಜನರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲಾಯಿತು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರೀಫ್ ಹಸನಬ್ಬನವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ SDPI ಉಡುಪಿ ಜಿಲ್ಲಾ ಅಧ್ಯಕ್ಷರಾದ ಶಾಹಿದ್ ಆಲಿ ,ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಅಶ್ರಫ್ ಬಾವ ಹಾಗೂ ಊರಿನ ಕೆಲವು ಗಣ್ಯರು ಉಪಸ್ಥಿತರಿದ್ದರು .ಕಾರ್ಯಕ್ರಮಕ್ಕೆ ಬಂದ ಎಲ್ಲರಿಗೂ SDPI ಕಾಪು ಕ್ಷೇತ್ರ ಅಧ್ಯಕ್ಷರಾದ ಹನೀಫ್ ಮೂಳೂರು ವಂದಿಸುತ್ತಾ ಕಾರ್ಯಕ್ರಮವನ್ನು ನಿರೂಪಿಸಿದರು .

