×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರಬಿವುಲ್ ಅವ್ವಲ್ 12 ವಿಶೇಷ ದಿನವಾಗಿ ಬಳಸಿಕೊಂಡ ಎಸ್. ಐ. ಓ ಮತ್ತು ಜೆ. ಐ. ಹೆಚ್. ಕಾಪು

ಕಾಪು : ನಾಳೆ ಪ್ರಳಯ ಬರುತ್ತದೆ ಎಂದು ಗೊತ್ತಿದ್ದರೂ ಇಂದು ಒಂದು ಗಿಡವನ್ನು ನೆಡಿರಿ ಎಂದು ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈವಸ್ಸಲಾಮ್ ತಿಳಿಸಿದ ಪ್ರಕಾರ ಕಾಪು ವರ್ತುಲದ ಎಸ್. ಐ. ಓ ಮತ್ತು ಜಮಾ ಅತೆ ಇಸ್ಲಾಮಿ ಹಿಂದ್ ತಮ್ಮ ಬಳಗದ ವಿದ್ಯಾರ್ಥಿಗಳು ಮತ್ತು ಬಂಧುಗಳೊಂದಿಗೆ ಪರಿಸರದಲ್ಲಿ ಹಸಿರು ಬೆಳೆಸುವ ನಿಟ್ಟಿನಲ್ಲಿ ರಬಿವುಲ್ ಅವ್ವಲ್ ನ 12 ನೇ ದಿವಸ ವಿಶೇಷವಾಗಿ ಬಳಸಿ ಮಲ್ಲಾರ್ ವ್ಯಾಪ್ತಿಯಲ್ಲಿ ಹಲವು ಗಿಡಗಳನ್ನು ನೆಡಲಾಯಿತು. ಹಾಗೂ ಮನುಷ್ಯನು ಮೃತಗೊಂಡ ನಂತರ ಮಯ್ಯತ್ ಸಂಸ್ಕರಣೆ ಮಾಡುವ ತರಭೇತಿ ಶಿಬಿರವನ್ನುತೌಹೀದ್ ಮಂಝಿಲ್ ವಠಾರದಲ್ಲಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮುಹಮ್ಮದ್ ಹನೀಫ್ ಜಾಫರ್ ರವರು, ಯಾಸೀನ್ ಮನ್ನಾ ಉಡುಪಿ ಭಾಗವಹಿಸಿದ್ದರು. ಕಾರ್ಯಕ್ರಮದ ಮಹತ್ವವನ್ನು ಜಮಾ ಅತೆ ಇಸ್ಲಾಮಿ ಹಿಂದ್ ನ ಸ್ಥಾನೀಯ ಅಧ್ಯಕ್ಷರು ಅನ್ವರ್ ಅಲಿ ಕಾಪು ಶಿಬಿರಾರ್ಥಿಗಳಿಗೆ ವಿವರಿಸಿದರು. ಎಸ್. ಐ. ಓ ನ ಅಧ್ಯಕ್ಷರಾದ ಅನೀಸ್ ಅಲಿ ಅತಿಥಿಗಳನ್ನು ಸ್ವಾಗತಿಸಿ ಕೊನೆಯಲ್ಲಿ ಧನ್ಯವಾದ ನೀಡಿದರು.ಕಾರ್ಯಕ್ರಮದಲ್ಲಿ ಮುಹಮ್ಮದ್ ಇಕ್ಬಾಲ್ ಸಾಹೇಬ್, ಮುಹಮ್ಮದ್ ಹಾಶಿಮ್ ಸಾಹೇಬ್, ಮುಹಮ್ಮದ್ ಅಲಿ, ಮುಹಮ್ಮದ್ ಅವೀಜ್, ಅಬ್ದುಲ್ ಖಾಲಿದ್, ಮುಹಮ್ಮದ್ ಸೈಫ್, ಅಕ್ಬರ್, ಸಕ್ಲೇನ್ ಪಾಷ , ಅಬ್ದುಲ್ ಅಹದ್ ಹಾಗೂ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *