×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಂಟಕಲ್ಲು ಶ್ರೀ ಶ್ರೀದುರ್ಗಾಪರಮೆಶ್ವರೀ ಸನ್ನಿಧಿಯಲ್ಲಿ ಶ್ರೀ ದುರ್ಗಾಹೋಮ, ಆರ್‌ಎಸ್‌ಬಿ ಯುವವೃಂದದಿAದ ಸಾಧಕರಿಗೆ ಸನ್ಮಾನ

ಭಾನುವಾರ ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವೀ ಸನ್ನಿಧಿಯಲ್ಲಿ ರಾಜಾಪುರ ಸಾರಸ್ವತ ಯುವವೃಂದ ಇದರ ಆಶ್ರಯದಲ್ಲಿ ೨೬ನೇ ವರ್ಷದ “ದುರ್ಗಾಹೋಮ” ಸೇವೆ, ಧಾರ್ಮಿಕ ಅನುಷ್ಠಾನಗಳು ಕಾರ್ಯಕ್ರಮ ಜರಗಿತು. ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣ, ಬೆಂಗಳೂರು ಇದರ ಸದಸ್ಯ ಸದಾಶಿವ ಪ್ರಭು ಎಳ್ಳಾರೆ ಉದ್ಘಾಠಿಸಿದರು.  ಮುಖ್ಯ ಅತಿಥಿಗಳಾಗಿ ಶ್ರೀದೇವಳದ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ, ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ್ ಪ್ರಭು ಗಂಪದಬೈಲು, ನೀರೆ ಗ್ರಾ,ಪಂ.ಅಭಿವೃದ್ಧಿ ಅಧಿಕಾರಿ ಅಂಕಿತಾ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಜಿಲ್ಲಾ ವೈಧ್ಯಾಧಿಕಾರಿ ಡಾ.ಮಧುಸೂದನ ನಾಯಕ್, ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕ ದಿನೇಶ್ ನಾಯಕ್ ಮುದರಂಗಡಿ, ಪಿಎಚ್‌ಡಿ ಗೌರವ ಸಾಧಕ ಪ್ರೊ. ವಿಠಲ್ ನಾಯಕ್, ಪುರಾತತ್ವ ಸಂಶೋಧಕ ಸುಭಾಷ್ ನಾಯಕ್ ಬಂಟಕಲ್ಲು, ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನುಸನ್ಮಾನಿಸಲಾಯಿತು. ವಿವಿಧ ಕ್ರೀಡಾ ಸ್ಫರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವೃಂದದ ಅಧ್ಯಕ್ಷ ರಾಘವೇಂದ್ರ ನಾಯಕ್ ಪಾಲಮೆ ವಹಿಸಿದ್ದರು.

Leave a Reply

Your email address will not be published. Required fields are marked *