022ರ ಮಾರ್ಚ್ 22 ರಂದು ದೇಶದ ಅತ್ಯುನ್ನತ ಪ್ರಜಾಸತ್ತಾತ್ಮಕ ಸಂಸ್ಥೆಯಾದ ಲೋಕಸಭೆಯಲ್ಲಿ ಸಾರಿಗೆ ಸಚಿವ ಶ್ರೀ ನಿತಿನ್ ಗಡ್ಕರಿಯವರು, ಕಾನೂನು ಬಾಹಿರವಾಗಿ ಎಲ್ಲಾ ಟೋಲ್ ಗೇಟ್ ಗಳನ್ನು ಮುಚ್ಚುವುದಾಗಿ ಭರವಸೆ ನೀಡಿದ್ದರು. ಅವರು ನೀಡಿದ ಅವಧಿ ಮುಗಿದು 4 ತಿಂಗಳು ಕಳೆಯುತ್ತಾ ಬಂದರೂ, ಸುರತ್ಕಲ್ ಟೋಲ್ ನಲ್ಲಿ ಕಾನೂನು ಬಾಹಿರವಾಗಿ ವಾಹನ ಸವಾರರಿಂದ ಟೋಲ್ ಹೆಸರಲ್ಲಿ ಲೂಟಿ ಮಾಡುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ಹಾಗೂ ಶಾಸಕರು, ಸಂಸತ್ ಸದಸ್ಯರು ಹಾಗೂ ಈ ಜಿಲ್ಲೆಗಳ ಮೂವರು ಮಂತ್ರಿಗಳು ಹೇಳಿಕೆ ನೀಡುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಸಾಕಷ್ಟು ಬಾರಿ ಉಡುಪಿ ಮತ್ತು ದ.ಕ. ಜಿಲ್ಲೆಯ ಸಾರ್ವಜನಿಕರು ಟೋಲ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ,ಧರಣಿ ನಡೆಸಿ ಸರಕಾರವನ್ನು ಎಚ್ಚರಿಸಿದರೂ ಸುಳ್ಳಿನ ಮೇಲೆ ಸುಳ್ಳಿನ ಭರವಸೆ ನೀಡುತ್ತಾ ಜನರನ್ನು ವಂಚಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 18ರಂದು ನಡೆಯುವ ಟೋಲ್ ತೆರವು ಕಾರ್ಯಾಚರಣೆಯ ಐತಿಹಾಸಿಕ ಹೋರಾಟದಲ್ಲಿ ಉಡುಪಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತಿದೇವೆ.
ಬಾಲಕ್ರಷ್ಣಶೆಟ್ಟಿ
ಸಿಪಿಐ-ಎಂ, ಉಡುಪಿ ಜಿಲ್ಲಾ ಕಾರ್ಯದರ್ಶಿ

