
ಮಹಮ್ಮದ್ ಪೈಗಂಬರ ಅವರ ಜನ್ಮದಿನದ ದಿನಾಚರಣೆಯ ಪ್ರಯುಕ್ತ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ವತಿಯಿಂದ ಶುಕ್ರವಾರ ಸಂಜೆ ಕಾಪುವಿನ ಪೋಲಿಪು, ಜುಮ್ಮಾ ಮಸೀದಿಯ ದರ್ಗಾದಲ್ಲಿ ಚಾಲನೆ ನೀಡಲಾಯಿತು. ರ್ಯಾಲಿಯ ಕಾಪು ಪೇಟೆಯಲ್ಲಿ ಸಮಾಪನಗೊಂಡಿದೆ. ಕಾಪುವಿನ ಖಾಜಿ ಅಲ್ ಹಜ್ ಶೈಖುನಾ ಅಜ್ಮಿದ್ ಮುಸ್ಲಿಯಾರವರು ಚಾಲನೆ ನೀಡಿದರು. ಈ ಸಂದರ್ಭ ನ್ಯಾಯವಾದಿ ಹಂಜತ್ ಹೆಜ್ಮಾಡಿ, ಎಂ.ಕೆ ಇಬ್ರಾಹಿಂ ಮಜೂರು, ಅಬ್ದುಲ್ ಸುಪರ್ಫರ್ ಎಂ. ಕೆ. ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.

