ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ನಿಧನರಾದರು. ಹನುಮಂತ ನಾಯ್ಕರವರು ತಮ್ಮ ಊರು ಬಾಗಲಕೋಟೆಗೆ ಹೋಗಿದ್ದ ವೇಳೆ ಇಂದು ಮುಂಜಾನೆ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. 2008ರ ಬ್ಯಾಚ್ನಲ್ಲಿ ಅವರು ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದು, ಈ ಹಿಂದೆ ಮುಲ್ಕಿ ಸಂಚಾರ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ, ಸಮಾಜಮುಖಿ ಕೆಲಸ, ದಕ್ಷ ಕೆಲಸ ಕಾರ್ಯಗಳಿಂದ ಅವರು ಪೊಲೀಸ್ ಇಲಾಖೆಯಲ್ಲಿ ಅಲ್ಪ ಕಾಲದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೂಲತಃ ಅವರು ಬಾಗಲ ಕೋಟೆ ಜಿಲ್ಲೆಯವರಾದರೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮ ಪೊಲೀಸ್ ಎನ್ನುವ ಹೆಸರು ಗಳಿಸಿದ್ದರು. ಮೃತರು ಪತ್ನಿ ಮಂಜುಳಾ, ಮಕ್ಕಳಾದ ಕೃತ್ತಿಕಾ, ಲಾವಣ್ಯ, ಕೃಪಾ ಮತ್ತು ಕುಶಾಲ್ ಅವರನ್ನು ಅಗಲಿದ್ದಾರೆ.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಂಡಿಸಿರುವ ಕಾಂತರಾಜು ವರದಿ ಪ್ರಜಾತಂತ್ರ ವ್ಯವಸ್ಥೆಯಡಿಯ ವಂಚಿತವರ್ಗಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಗುರಿ ಹೊಂದಿದೆಯೇ ಹೊರತು, ಸಮಾಜದ ಯಾವುದೇ ವರ್ಗವನ್ನು ಅವಗಣಿಸುವ ಅಸಾಂವಿಧಾನಿಕ ನಿಲುವನ್ನು ಹೊಂದಿಲ್ಲ ಎಂದು ಆಯೋಗದ […]
ಕಾಪು ಬ್ಲಾಕ್ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ,, ಪ್ರಸ್ತುತ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯ , ಕಾಪು ತಾಲೂಕು ಭೂನ್ಯಾಯ ಮಂಡಳಿ ಸದಸ್ಯರಾದ ರಮೀಜ್ ಹುಸೇನ್ ರವರನ್ನು ರಾಷ್ಟೀಯ ಯುವ ಕಾಂಗ್ರೆಸ್ ಪದಾಧಿಕಾರಿಯಾದ […]
ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನ ಕಾರ್ಯಕ್ರಮವು ಗೋವರ್ಧನ ಗೋಶಾಲೆ ನೀಲಾವರದಲ್ಲಿನಡೆಯಿತು. ಗಾಂಧೀಜಿ ಚಿಂತನೆಯ ಸತ್ಯ, ಅಹಿಂಸೆ ಗ್ರಾಮೀಣಾಭಿವೃದ್ಧಿ ಮತ್ತು ಸಮಾಜ ಸೇವೆಯು ರಾಷ್ಟ್ರೀಯ […]
ಉಡುಪಿ ನ.20: ಸುವರ್ಣ ಕರ್ನಾಟಕ ಕಾರ್ಮಿಕ ವೇದಿಕೆ ವತಿಯಿಂದ ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ಶೇಖ್ ವಾಹಿದ್ ದಾವುದ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನೀಡಿ ಸನ್ಮಾನಿ ಸಲಾಯಿತು .ಕನ್ನಡ […]