ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ನಿಧನರಾದರು. ಹನುಮಂತ ನಾಯ್ಕರವರು ತಮ್ಮ ಊರು ಬಾಗಲಕೋಟೆಗೆ ಹೋಗಿದ್ದ ವೇಳೆ ಇಂದು ಮುಂಜಾನೆ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. 2008ರ ಬ್ಯಾಚ್ನಲ್ಲಿ ಅವರು ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದು, ಈ ಹಿಂದೆ ಮುಲ್ಕಿ ಸಂಚಾರ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ, ಸಮಾಜಮುಖಿ ಕೆಲಸ, ದಕ್ಷ ಕೆಲಸ ಕಾರ್ಯಗಳಿಂದ ಅವರು ಪೊಲೀಸ್ ಇಲಾಖೆಯಲ್ಲಿ ಅಲ್ಪ ಕಾಲದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೂಲತಃ ಅವರು ಬಾಗಲ ಕೋಟೆ ಜಿಲ್ಲೆಯವರಾದರೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮ ಪೊಲೀಸ್ ಎನ್ನುವ ಹೆಸರು ಗಳಿಸಿದ್ದರು. ಮೃತರು ಪತ್ನಿ ಮಂಜುಳಾ, ಮಕ್ಕಳಾದ ಕೃತ್ತಿಕಾ, ಲಾವಣ್ಯ, ಕೃಪಾ ಮತ್ತು ಕುಶಾಲ್ ಅವರನ್ನು ಅಗಲಿದ್ದಾರೆ.
ಬೈಲೂರು ಎರ್ಲಪಾಡಿಯ ಪರಶುರಾಮ ಥೀಂ ಪಾಕ್ ೯ನಲ್ಲಿ ಪ್ರತಿಷ್ಟಾಪನೆಗೊಂಡ ಪರಶುರಾಮನ ಪ್ರತಿಮೆ ರಹಸ್ಯ ಬಯಲಿಗೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಕಾಂಗ್ರೆಸ್ ಮುಖಂಡರ ವಿರುದ್ಧ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ತಡೆಯಾಜ್ಞೆ […]
ಉಡುಪಿ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನಾಡಿನ ಹಿರಿಯ ಮುತ್ಸದ್ದಿ, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದಕ್ಕೆ ಕೆಪಿಸಿಸಿ ಕೋ-ಆರ್ಡಿನೇಟರ್ ಅಲೆವೂರು ಹರೀಶ್ ಕಿಣಿ ಹರ್ಷ […]
ಉಡುಪಿ: ದುಬೈ ಮೂಲದ ಪ್ರೊಪರ್ಟಿ ಸರ್ವೀಸ್ ಕಂಪೆನಿಯಾದ “ಮೊಲ್ಟೊ ಕೇರ್” ಉಡುಪಿಯಲ್ಲಿ ಶುಭಾರಂಭ. ಭಾರತದಲ್ಲೇ ಪ್ರಥಮವಾಗಿ ಉಡುಪಿಯಲ್ಲಿ ಎ.2ರಂದು ಕುಂಜಿಬೆಟ್ಟುವಿನಲ್ಲಿ ಕಾರ್ಯಾರಂಭಿಸಲಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕ ಕೃಷ್ಣರಾಜ್ ತಂತ್ರಿ […]
ಉಡುಪಿ ಜಿಲ್ಲಾ ಆಯುಷ್ ಆಸ್ಪತ್ರೆಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಸ್ಥಾಪಕರು, ದಾನಿಗಳಾದ ಉಡುಪಿ ವಿಶ್ವನಾಥ್ ಶೆಣೈೆಯವರು ರೋಗಿಗಳಿಗೆ ಅಗತ್ಯವಿರುವ ವೀಲ್ ಚೇರ್ ಮತ್ತು ವಾಕರ್ ಗಳನ್ನು ಆಸ್ಪತ್ರೆಯ ವೈಧ್ಯಧಿಕಾರಿಗಳಾದ ಡಾ. ಸತೀಶ್ […]