×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ: ಬೈಕ್ ಗೆ ಲಾರಿ ಡಿಕ್ಕಿ ; ಸಬ್ ಇನ್ಸ್‌ಪೆಕ್ಟರ್ ಸ್ಪಾಟ್‌ಡೆತ್…!

 

ಉಡುಪಿ: ಉಡುಪಿ ಹೊರ ವಲಯದ ಅಂಬಾಗಿಲಿನಲ್ಲಿ ಲಾರಿ ಡಿಕ್ಕಿ ಹೊಡೆದು ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ಸ್‌ಸ್ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಿನ್ನೆ ತಡ ರಾತ್ರಿ ನಡೆದಿದೆ. ಇಲ್ಲಿನ ಬ್ರಹ್ಮಾವರದ ಉಳ್ಳೂರು ನಿವಾಸಿ ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಶಂಕರ್ (52) ಮೃತ ದುರ್ದೈವಿಯಾಗಿದ್ದಾರೆ. ಮಂಗಳೂರು ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ಮುಗಿಸಿ ಬಸ್ ನಿಂದ ಉಡುಪಿಗೆ ಬಂದಿದ್ದ ಇವರು ತಮ್ಮ ಬೈಕ್ ನಲ್ಲಿ ಉಳ್ಳೂರು ಕಡೆ ಹೋಗುತ್ತಿದ್ದಾಗ ಅತೀ ವೇಗದಿಂದ ಆಗಮಿಸಿದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಬಳಿಕ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತಾದ್ರೂ, ಚಿಕಿತ್ಸೆ ಫಲಕರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *