×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರೂ. 32 ಲಕ್ಷ ವೆಚ್ಚದಲ್ಲಿ ಅಂಬಲಪಾಡಿ ಉದ್ಯಾನವನ ಅಭಿವೃದ್ಧಿ – ಶಾಸಕ ರಘುಪತಿ ಭಟ್ ಉದ್ಘಾಟನೆ

ಉಡುಪಿ ನಗರಸಭೆಯ ಅಂಬಲಪಾಡಿ ವಾರ್ಡಿನ ಉದ್ಯಾನವನ ಅಭಿವೃದ್ಧಿ ಅಭಿವೃದ್ಧಿಗೆ 2022-23 ನೇ ಸಾಲಿನ 15ನೇ ಹಣಕಾಸು ಆಯೋಗದಡಿ ರೂ. 32 ಲಕ್ಷ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 13-01-2023 ರಂದು ಶಾಸಕರಾದ ಕೆ. ರಘುಪತಿ ಭಟ್ ಅವರು ಉದ್ಯಾನವನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ಸ್ಥಳೀಯ ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *