
ಬೈಂದೂರು: ವಂಡ್ಸೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮತ್ತವರ ಬೆಂಬಲಿಗರು ಇಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ಪಕ್ಷ ಸೇರ್ಪಡೆ ಸಂಧರ್ಭದಲ್ಲಿ ಶರತ್ ಕುಮಾರ್ ಶೆಟ್ಟಿ, ವಂಡ್ಸೆ ಗ್ರಾ.ಪಂ ಅಧ್ಯಕ್ಷರಾದ ಉದಯ್ ಶೆಟ್ಟಿ, ಗುಂಡು ಪೂಜಾರಿ ಗೋವರ್ಧನ ಜೋಗಿ ಶ್ರೀನಿವಾಸ್ ಪೂಜಾರಿ, , ಮಾಜಿ ತಾ.ಪಂ ಸದಸ್ಯ ಉದಯ್ ಜಿ ಪೂಜಾರಿ ,ವಂಡ್ಸೆ ಬ್ಲಾಕ್ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮೊಗವೀರ, ದೇವದಾಸ್ ಜಡ್ಕಲ್, ಮತ್ತಿತರರು ಉಪಸ್ಥಿತರಿದ್ದರು

