×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿಯಲ್ಲಿ ರಾಷ್ಟ್ರೀಯ ಮಟ್ಟದ ಡ್ರ್ಯಾಗನ್ ಬೋಟ್ ಪಂದ್ಯಾವಳಿ – ಪೂರ್ವ ತಯಾರಿಯ ಬಗ್ಗೆ ಶಾಸಕ ರಘುಪತಿ ಭಟ್ ಸ್ಥಳ ಪರಿಶೀಲನೆ

ರಾಷ್ಟ್ರೀಯ ಮಟ್ಟದ ಡ್ರ್ಯಾಗನ್ ಬೋಟ್ ಪಂದ್ಯಾವಳಿ ಫೆಬ್ರವರಿ 23 ರಿಂದ 26ರ ವರೆಗೆ ಉಪ್ಪೂರಿನ ಮಡಿಸಾಲು ನದಿಯಲ್ಲಿ ನಡೆಯಲಿದ್ದು, ಇಂದು ದಿನಾಂಕ 30-01-2023 ರಂದು ಶಾಸಕರಾದ ಕೆ. ರಘುಪತಿ ಭಟ್ ರವರು ಸ್ಥಳಕ್ಕೆ ಭೇಟಿ ಪೂರ್ವ ತಯಾರಿಯ ಬಗ್ಗೆ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಚರ್ಚಿಸಿದರು. ರಾಷ್ಟ್ರೀಯ ಮಟ್ಟದ ಈ ಪಂದ್ಯಾವಳಿಯಲ್ಲಿ ದೇಶದ ವಿವಿಧ ಭಾಗಗಳಿಂದ 700 ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದು ವಿಜೇತರಾದವರು ಏಷ್ಯನ್ ಗೇಮ್ಸ್ ನಲ್ಲಿ ಭಾರತದಿಂದ ಪ್ರತಿನಿಧಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಕಯಾಕಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಜನರಲ್ ಎಂ.ಎನ್ ದೇವಯ್ಯ, ಕಾರ್ಯದರ್ಶಿಗಳಾದ ದಿಲೀಪ್ ಕುಮಾರ್, ಉಡುಪಿ ಜಿಲ್ಲಾ ಕಯಾಕಿಂಗ್ ಅಸೋಸಿಯೇಷನ್ ಕಾರ್ಯದರ್ಶಿಗಳಾದ ದಿನೇಶ್ ಸೆಂಟರ್ ಫಾರ್ ಸ್ಪೋರ್ಟ್ಸ್ ಅಂಡ್ ಸೈನ್ಸ್ ನ ಆಂಟೋನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ, ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕೋಟ್ಯಾನ್, ಹಾರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ ಹಾಗೂ ಉಪ್ಪೂರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *