
ರಿಯಾದ್: ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ಫೆ.4 ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಳೆಯಂಗಡಿ ಬಳಿಯ ಕದಿಕೆ ನಿವಾಸಿ ರಿಝ್ವಾನ್, ಸುರತ್ಕಲ್ ಕೃಷ್ಣಾಪುರದ ಶಿಹಾಬ್, ಮಂಗಳೂರು ಬೆಂಗರೆ ನಿವಾಸಿ ಅಕೀಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಘಟನೆ ದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಅಲ್-ಹಸಾ ಎಂಬ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಸಂಭವಿಸಿದೆ ಎನ್ನಲಾಗಿದೆ.

