×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಹೆಜಮಾಡಿ: ದೋಣಿ ಮಗುಚಿ ಮೀನುಗಾರ ಮೃತ್ಯು.

ಪಡುಬಿದ್ರಿ: ಹೆಜಮಾಡಿ ಕೋಡಿಯಿಂದ ಮುಂಜಾನೆ ಮೀನುಗಾರಿಕೆ ಹೊರಟಿದ್ದ ನಾಡದೋಣಿಯೊಂದು ಅಳಿವೆಬಾಗಿಲಿನಲ್ಲಿ ದೊಡ್ಡ ಸಮುದ್ರದಲೆಯ ಹೊಡೆತಕ್ಕೆ ಸಿಲುಕಿ ಮುಗುಚಿ ಬಿದ್ದ ಪರಿಣಾಮ ಬೋಟಿನಲ್ಲಿದ್ದ ಹೆಜಮಾಡಿಕೋಡಿ ನಿವಾಸಿ ಪದ್ಮನಾಭ ಸುವರ್ಣ (47) ಅವರು ಸಮುದ್ರದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಇನ್ನೋರ್ವ ಧೀರೇಶ್ ಬಂಗೇರ ಈಜಿ ದಡ ಸೇರಿದ್ದಾರೆ. ಪದ್ಮನಾಭ ಸುವರ್ಣ ಮೃತದೇಹವು ಶುಕ್ರವಾರ ಬೆಳಗ್ಗೆ ಹೆಜಮಾಡಿಕೋಡಿಯಲ್ಲಿ ಪತ್ತೆಯಾಗಿದೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *