
ಕಾಪು ಕರಂದಾಡಿ ನಿವಾಸಿ ನಿವೃತ್ತ ಮುಖ್ಯೋಪಾಧ್ಯಾಯ ಹಾಜಿ ಬಾವು ಬ್ಯಾರಿ ಕರಂದಾಡಿ ಇವರು ತಾ 25.02.23 ರಂದು ಅಲ್ಪಕಾಲದ ಅಸೌಖ್ಯದಿಂದ ತನ್ನ ನಿವಾಸದಲ್ಲಿ ನಿದನರಾದರು
ಶ್ರೀಯುತರು ಮಲ್ಲಾರು ಕರಂದಾಡಿ, ಪುಂಜಾಲಕಟ್ಟೆ,ಪಡುಬಿದ್ರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಾಪಕರಾಗಿ ಮುಖ್ಯೋಪಾದ್ಯಾಯರಾಗಿ 35 ವರ್ಷ ಸೇವೆಸಲ್ಲಿಸಿದ್ದಾರೆ ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಆಡಳಿತ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು
ಶ್ರೀಯುತರು ಪತ್ನಿ ಹಾಗೂ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಹೃದ್ರೋಗ ತಗ್ಜ್ಯರಾಗಿದ್ದು ಇದೀಗ ವಿದೇಶದಲ್ಲಿರುವ ಡಾ| ಅಬ್ದುಲ್ ರಝಕ್ ಯು.ಕೆ ಸೇರಿದಂತೆ ನಾಲ್ವರು ಪುತ್ರರು ಎರಡು ಪುತ್ರಿಯರನ್ನು ಅಗಲಿದ್ದಾರೆ ಮೃತರ ನಿದನಕ್ಕೆ ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಬಳಕೆದಾರರ ವೇದಿಕೆ ದೇವಿನಗರ ಪರ್ಕಳ ಅಜೀವ ಗೌರವಾದ್ಯಕ್ಷ ಹಾಜಿ ಕೆ.ಅಬೂಬಕ್ಕರ್ ಪರ್ಕಳ, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ ಸಂತಾಪ ವ್ಯಕ್ತಪಡಿಸಿದ್ದಾರೆ

